Advertisement

Udupi: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ಇನ್ನಿಲ್ಲ

01:50 PM Feb 02, 2024 | Team Udayavani |

ಉಡುಪಿ: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ಅವರು ಗುರುವಾರ ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

Advertisement

ಕಳೆದ ನವರಾತ್ರಿ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಹುಲಿವೇಷ ಕಾರ್ಯಕ್ರಮದಲ್ಲೇ ಕುಸಿದು ಬಿದ್ದಿದ್ದ ಅವರನ್ನು ಬೆಂಗಳೂರಿನಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ಹುಲಿ ವೇಷಧಾರಿ ಕಲಾವಿದ ಕಿಶೋರ್ ರಾಜ್ ಕಾಡಬೆಟ್ಟು ತಿಳಿಸಿದ್ದಾರೆ.

ನೂರಾರು ಮಂದಿಗೆ ಹುಲಿವೇಷ ತರಬೇತಿ ನೀಡುತ್ತಿದ್ದ ಅಶೋಕ್ ರಾಜ್ ಕಾಡಬೆಟ್ಟು ಕರಾವಳಿಯೆಲ್ಲೆಡೆ ಜನಪ್ರಿಯರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next