Advertisement

Udupi: ಬಾಲಕಿಯ ಚಿನ್ನದ ಸರ ಸುಲಿಗೆ

12:38 AM Jan 20, 2024 | Team Udayavani |

ಉಡುಪಿ: ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠದ ರಥಬೀದಿಗೆ ತಾಯಿಯೊಂದಿಗೆ ಆಗಮಿಸಿದ್ದ ಬಾಲಕಿಯೊಬ್ಬಳ ಚಿನ್ನದ ಸರವನ್ನು ಅಪರಿಚಿತರಿಬ್ಬರು ಸುಲಿಗೆ ಮಾಡಿರುವ ಘಟನೆ ಜ. 18ರಂದು ಸಂಜೆ ವೇಳೆ ನಡೆದಿದೆ.

Advertisement

ಕೊರಂಗ್ರಪಾಡಿ ವಾಸುಕಿ ನಗರದ ಶರೀನಾ ಬೇಗಂ ಅವರು ತನ್ನ ಪುತ್ರಿ ಅನ್ಹಾ (4) ಜತೆಗೆ ರಥಬೀದಿಗೆ ಬಂದಿದ್ದು, ಕನಕ ಗೋಪುರದ ಹತ್ತಿರವಿರುವ ಅಂಗಡಿಯಲ್ಲಿ ಸಾಮಗ್ರಿಗಳನ್ನು ನೋಡುತ್ತಿದ್ದಾಗ 30-35 ವರ್ಷದ ಪ್ರಾಯದ ಅಪರಿಚಿತರಿಬ್ಬರು, ಅನ್ಹಾ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸೆಳೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಕಳವಾದ ಚಿನ್ನದ ಸರದ ಮೌಲ್ಯ 50,000 ರೂ. ಎಂದು ಅಂದಾಜಿಸಲಾಗಿದೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next