Advertisement

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

06:04 PM Oct 06, 2024 | Team Udayavani |

ಉಡುಪಿ: ಗ್ರಾಮ ಪಂಚಾಯಿತಿಗಳಲ್ಲಿ (ಗ್ರಾ.ಪಂ.) ಕೆಲಸ ನಿರ್ವಹಿಸುತ್ತಿರುವ ಪಿಡಿಒ, ಕಾರ್ಯದರ್ಶಿ, ಎಸ್‌ಡಿಎ ಮತ್ತು ಪಂಚ ನೌಕರರ ಬೇಡಿಕೆ ಈಡೇರಿಸುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡ ಮುಷ್ಕರಕ್ಕೆ ಸರಕಾರ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸದಿರುವುದರಿಂದ ಪ್ರತಿಭಟನೆಯು ಜಿಲ್ಲಾ ಮಟ್ಟದಲ್ಲಿ ಮುಂದುವರಿಸಲಾಗುವುದು ಎಂದು ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ್ ಪಿ. ಶೆಟ್ಟಿ ತಿಳಿಸಿದ್ದಾರೆ.

Advertisement

ಅ.4ರಿಂದ 11 ವೃಂದ ಸಂಘಟನೆಗಳು ಉಡುಪಿ ಜಿಲ್ಲೆ ಸಹಿತ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಯಲ್ಲಿ ಎಲ್ಲ ಸೇವೆಗಳ ನಿಲ್ಲಿಸಿ ಮುಷ್ಕರ ಹಮ್ಮಿಕೊಂಡಿದ್ದೇವೆ. ಅ.7ರಿಂದ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಆವರಣ ರಜತಾದ್ರಿಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಸುತ್ತೇವೆ. ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಸೇವೆ ಲಭ್ಯ ಇರುವುದಿಲ್ಲ. ಎಲ್ಲ ಗ್ರಾಮ ಪಂಚಾಯಿತಿಗಳ ಪಿಡಿಒ, ಕಾರ್ಯದರ್ಶಿ, ಎಸ್‌ಡಿಎ ಸಹಿತ ಪಂಚ ನೌಕರರು ಮುಷ್ಕರದಲ್ಲಿ ಭಾಗವಹಿಸುತ್ತಿದ್ದಾರೆ. ಸರಕಾರ ಮನವಿಗೆ ಸ್ಪಂದಿಸದಿದ್ದಲ್ಲಿ ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಮಂಜುನಾಥ್ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಗ್ರಾಮ ಪಂಚಾಯಿತಿ ನೌಕರರ ಮುಷ್ಕರದಿಂದ ಪಂಚಾಯಿತಿ ಸೇವೆ ವ್ಯತ್ಯಯವಾಗಿದ್ದು, ಹಲವು ಯೋಜನೆಗಳ ಅನುಷ್ಠಾನಕ್ಕೆ ಹಿನ್ನಡೆಯಾಗಿ ಸಾರ್ವಜನಿಕರ ಅಗತ್ಯ, ಕೆಲಸ ಕಾರ್ಯಗಳಿಗೂ ಸಂಕಷ್ಟ ಎದುರಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next