Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲೆ ಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ವಿದೇಶಗಳಿಂದ ಬಂದಿದ್ದರು. ಅವರೆಲ್ಲರ ಕ್ವಾರಂಟೈನ್ ಅವಧಿ ಮುಗಿದ ಕಾರಣ ವಿದೇಶಗಳಿಂದ ಬಂದವರಿಂದ ನಮ್ಮ ಜಿಲ್ಲೆ ಗೆ ಕೋವಿಡ್ 19 ಭಯ ಸದ್ಯಕ್ಕಿಲ್ಲ. ಪಾಸಿಟಿವ್ ಬಂದ ಮೂವರ ನಿಕಟವರ್ತಿಗಳು ಐಸೊಲೇಶನ್ ವಾರ್ಡ್ನಲ್ಲಿದ್ದಾ ರೆ. ಸದ್ಯ ಯಾರಲ್ಲೂ ರೋಗ ಲಕ್ಷಣಗಳು ಕಂಡುಬಂದಿಲ್ಲ. ಪ್ರಾಥಮಿಕ ಸಂಪರ್ಕ ಇದ್ದ ವ್ಯಕ್ತಿಗಳ ವರದಿ ನೆಗೆಟಿವ್ ಬಂದಿದೆ. ಸಾರ್ವಜನಿಕರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದರು.
ಲಾಕ್ಡೌನ್ ಅವಧಿ ಮುಗಿಯುವವರೆಗೆ ಶಿಸ್ತು, ಸಂಯಮ ಪಾಲಿಸಬೇಕು. ಬೆಳಗ್ಗೆ 7ರಿಂದ 11.30ರ ವರೆಗೆ ಅಗತ್ಯ ವಸ್ತು ಖರೀದಿಗೆ ಮಾತ್ರ ಅವಕಾಶವಿದೆ. ಕೆಲಸವಿಲ್ಲದೆ ತಿರುಗುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾರೂ ಅವಕಾಶದ ದುರುಪ ಯೋಗ ಮಾಡಬಾರದು. ಕೆಲಸವಿಲ್ಲದೆ ಓಡಾಡುತ್ತಿದ್ದರೆ ವಾಹನ ಜಪ್ತಿ ಮಾಡುತ್ತೇವೆ ಎಂದರು.
Related Articles
ಲಾಕ್ಡೌನ್ ಅವಧಿಯಲ್ಲಿ ಸಾಕಷ್ಟು ದಾನಿಗಳು ನೆರವಿಗೆ ಧಾವಿಸಿದ್ದಾ ರೆ. ಊಟೋಪಚಾರ ಮತ್ತು ದಿನಸಿಯನ್ನು ದಾನಿಗಳಿಂದ ನಿರ್ವಹಿಸಲಾಗಿದೆ. ಈವರೆಗೆ ಸರಕಾರದ ಯಾವುದೇ ಅನುದಾನ ಬಳಸಿಲ್ಲ ಎಂದು ಹೇಳಿದರು.
Advertisement