Advertisement

Udupi: ಪತ್ನಿ, ಮಕ್ಕಳನ್ನು ಬಿಟ್ಟು ಪರಾರಿಯಾದ ಪತಿ!: ಪ್ರಕರಣ ಸುಖಾಂತ್ಯ

09:05 PM Sep 24, 2024 | Team Udayavani |

ಉಡುಪಿ: ಅನಾರೋಗ್ಯ ಪೀಡಿತ ಪತ್ನಿಯನ್ನು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಬಂದಿದ್ದ ಪತಿಯು ಪತ್ನಿ, ಇಬ್ಬರು ಮಕ್ಕಳು ಹಾಗೂ ಅತ್ತೆಯನ್ನು ನಗರದ ಸಿಟಿ ಬಸ್‌ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ.

Advertisement

ಬಿಹಾರ ಮೂಲದ ಇವರು ಬಹಳ ಹೊತ್ತು ಕಳೆದರೂ ವ್ಯಕ್ತಿ ಬಾರದ ಹಿನ್ನೆಲೆಯಲ್ಲಿ ಅವರ ಪತ್ನಿ ಸಹಿತ ಎಲ್ಲರೂ ಬೊಬ್ಬಿಡಲು ಆರಂಭಿಸಿದ್ದರು. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ತತ್‌ಕ್ಷಣ ಸ್ಥಳಕ್ಕೆ ಆಗಮಿಸಿದ ಅವರು ನಾಲ್ವರನ್ನೂ ಮಹಿಳಾ ಪೊಲೀಸ್‌ ಠಾಣೆಗೆ ತಂದೊಪ್ಪಿಸಿದರು.

ಬಳಿಕ ನಿಟ್ಟೂರಿನ ಸಖೀ ಕೇಂದ್ರಕ್ಕೆ ದಾಖಲಿಸಲಾಯಿತು. ಸುಮಾರು ಹೊತ್ತಿನ ಬಳಿಕ ಪತಿ ಆಗಮಿಸಿದ್ದಾನೆ. ಚಿಕಿತ್ಸೆಗೆ ಹಣ ಹೊಂದಿಸಲು ಕಷ್ಟಕರವಾದ ಕಾರಣ ಬರಲು ತಡವಾಯಿತು ಎಂದು ಪತಿ ಹೇಳಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next