Advertisement

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

07:55 PM Oct 21, 2024 | Team Udayavani |

ಉಡುಪಿ: ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಕ ಸಂಘದ ಶತಮಾನೋತ್ಸವ ಕಾರ್ಯಕ್ರಮ “ಶತಾಭಿವಂದನಂ’ ಆಚರಣೆಯ ಸಮಾರೋಪ ಸಂಭ್ರಮವು ಅ. 27ರ ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಕೆಮ್ಮಣ್ಣು ಸರಕಾರಿ ಪ.ಪೂ. ಕಾಲೇಜಿನ ಮೈದಾನದಲ್ಲಿ ಜರಗಲಿದೆ.

Advertisement

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಶತಮಾನೋತ್ಸವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಲೋಕಾಯುಕ್ತ ಎನ್‌. ಸಂತೋಷ ಹೆಗ್ಡೆ ದೀಪ ಬೆಳಗಿಸುವರು. ಮಣಿಪಾಲ ಡಾ| ಟಿಎಂಎ ಪೈ ಫೌಂಡೇಶನ್‌ ಅಧ್ಯಕ್ಷ ಅಶೋಕ್‌ ಪೈ ಕೊಡುಗೆ ಹಸ್ತಾಂತರಿಸಲಿದ್ದಾರೆ. ಸಂಘದ ಅಧ್ಯಕ್ಷ ಟಿ. ಸತೀಶ್‌ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಕೆಮ್ಮಣ್ಣು ಸಂತ ತೆರೇಸಾ ಚರ್ಚ್‌ನ ಧರ್ಮಗುರು ರೆ| ಫಾ| ಫಿಲಿಪ್‌ ನೇರಿ ಅರಾನ್ಹ ಶುಭಾಶಂಸನೆಗೈಯ್ಯುವರು. ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಸಹಕಾರಿ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌, ಶಾಸಕ ಯಶ್‌ಪಾಲ್‌ ಎ. ಸುವರ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್‌, ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಜಿ.ಟಿ. ದೇವೇಗೌಡ, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಮಾಜಿ ಸಚಿವರಾದ ಕೆ. ಜಯಪ್ರಕಾಶ ಹೆಗ್ಡೆ, ಪ್ರಮೋದ್‌ ಮಧ್ವರಾಜ್‌, ಕಾಂಚನ ಹ್ಯುಂಡೈನ ಎಂಡಿ ಪ್ರಸಾದ್‌ರಾಜ್‌ ಕಾಂಚನ್‌, ಬೀಚ್‌ ಹೀಲಿಂಗ್‌ ಸೆಂಟರ್‌ನ ಡಾ| ಮಹಮ್ಮದ್‌ ರಫೀಕ್‌, ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯಾ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕಿ ರೇಣುಕಾ ಜಿ., ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು, ಅಶೋಕ್‌ ಶೆಟ್ಟಿ ಬೆಳ್ಳಂಪಳ್ಳಿ, ರಾಜೇಶ್‌ ರಾವ್‌ ಪಾಂಗಾಳ, ಕೆಮ್ಮಣ್ಣು ಸರಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ರಾವ್‌, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜನಾರ್ದನ ತೋನ್ಸೆ, ತೋನ್ಸೆ ಗ್ರಾ.ಪಂ. ಅಧ್ಯಕ್ಷೆ ಕುಸುಮಾ ರವೀಂದ್ರ, ಕಲ್ಯಾಣಪುರ ಗ್ರಾ.ಪಂ. ಅಧ್ಯಕ್ಷ ನಾಗರಾಜ ಕುಂದರ್‌, ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಡಿ. ನಾಯಕ್‌, ಬಡನಿಡಿಯೂರು ಗ್ರಾ.ಪಂ. ಅಧ್ಯಕ್ಷೆ ಯಶೋದಾ ಆಚಾರ್ಯ ಉಪಸ್ಥಿತರಿರುವರು.

ಕುಂದಾಪುರ ಸಹಕಾರ ಸಂಘಗಳ ನಿವೃತ್ತ ಉಪನಿಬಂಧಕ ಅರುಣ್‌ ಕುಮಾರ್‌ ಎಸ್‌.ವಿ. ಹಾಗೂ ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರು, ನಿವೃತ್ತ ಸಿಬಂದಿಯನ್ನು ಗೌರವಿಸಲಾಗುವುದು ಎಂದು ಸಂಘದ ಉಪಾಧ್ಯಕ್ಷ ಬಿ. ಅಫ್ಜಲ್‌ ಸಾಹೇಬ್‌, ಸಿಇಒ ಮಹೇಶ್‌ ಸಾಲ್ಯಾನ್‌ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next