Advertisement

Udupi; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ: ಪೂರ್ಣಗೊಳಿಸಿದವರಿಂದ ಕೃಷ್ಣಾರ್ಪಣೆಗೆ ಅವಕಾಶ

01:31 AM Mar 12, 2024 | Team Udayavani |

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಂಕಲ್ಪಿಸಿದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆಯನ್ನು ದೇಶ ವಿದೇಶಗಳ ಭಕ್ತರು ಈಗಾಗಲೇ ಪಡೆದಿದ್ದು, ಅವರಲ್ಲಿ ಅನೇಕರು ಉತ್ಸಾಹದಿಂದ ಲೇಖನವನ್ನು ಸಂಪೂರ್ಣಗೊಳಿಸಿದ್ದಾರೆ.

Advertisement

ಭಕ್ತರು ಶ್ರದ್ಧಾ ಭಕ್ತಿಯಿಂದ ಬರೆದಿರುವ ಗೀತಾ ಲೇಖನ ಪುಸ್ತಕವನ್ನು ಶ್ರೀಪಾದರು ಸ್ವೀಕರಿಸಿ ಶ್ರೀಕೃಷ್ಣನಿಗೆ ಸಮರ್ಪಣೆ ಪ್ರಾರಂಭಿಸಿದ್ದಾರೆ. ಈಗಾಗಲೇ ಬರೆದು ಮುಗಿಸಿದವರು ಪರ್ಯಾಯ ಅವಧಿಯಲ್ಲಿ ಉಡುಪಿಗೆ ಭೇಟಿ ನೀಡಿ ಶ್ರೀಪಾದರ ಮೂಲಕ ಶ್ರೀಕೃಷ್ಣನಿಗೆ ಸಮರ್ಪಿಸಿ ಪ್ರಸಾದವನ್ನು ಸ್ವೀಕರಿಸುವಂತೆ ಶ್ರೀಮಠದ ಪ್ರಕಟನೆ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next