Advertisement

Udupi;ಕೃಷ್ಣಮಾಸೋತ್ಸವ ಸಮಾರೋಪ:ಕೇರಳ ರಾಜ್ಯಪಾಲ ಆರೀಫ್ ಖಾನ್ ಶ್ರೀಕೃಷ್ಣ ಮಠಕ್ಕೆ

06:29 PM Aug 30, 2024 | Team Udayavani |

ಉಡುಪಿ: ಪರ್ಯಾಯ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಗಸ್ಟ್ 1ರಿಂದ ಆರಂಭಗೊಂಡ ವೈಭವದ ಶ್ರೀಕೃಷ್ಣ ಮಾಸೋತ್ಸವ ಸೆಪ್ಟೆಂಬರ್ 1ರಂದು ಸಮಾಪನಗೊಳ್ಳಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆದ ಈ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು, ಸಮಾರೋಪ ಸಮಾರಂಭ ಅಂಗವಾಗಿ ಶ್ರೀಕೃಷ್ಣನಿಗೆ ಸೆ.1ರಂದು ಉದಯಾಸ್ತಮಾನ ಸೇವೆ ಆಯೋಜಿಸಲಾಗಿದೆ.

Advertisement

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಪರಿಷತ್ ಉಡುಪಿ ವಲಯ ಹಾಗೂ ಪಡುಬಿದ್ರಿ ತರಂಗಿಣಿ ಮಿತ್ರ ಮಂಡಳಿ ವತಿಯಿಂದ ಲಕ್ಷ ತುಳಸಿ ಅರ್ಚನೆ ಹಾಗೂ ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸಾರೆ ಗಮ ಪ ಸೀಸನ್ 15ರ ರನ್ನರ್ ಅಪ್ ಕಲಾವಿದೆ ವಿದುಷಿ ಸಾಧ್ವಿನಿ ಕೊಪ್ಪ ಅವರಿಂದ ಬೆಳಿಗ್ಗೆ 10ರಿಂದ 12ರ ವರೆಗೆ ಶಾಸ್ತ್ರೀಯ ಸಂಗೀತ ಕಛೇರಿ ಆಯೋಜಿಸಲಾಗಿದೆ. ಅಪರಾಹ್ನ 3ರಿಂದ 5ರ ವರೆಗೆ ಸಂಯುಕ್ತ ಸಂಸ್ಥಾನ (ಯು.ಕೆ) ನೃತ್ಯ ನಿರ್ದೇಶಕಿ ದಿವ್ಯಾ ಭಟ್ ಅವರಿಂದ ಕಥಕ್ ನೃತ್ಯ ಹಾಗೂ ರಾತ್ರಿ 7ರಿಂದ 9ರವರೆಗೆ ಸ್ವೀಡನ್ ನ ವಿದುಷಿ ದಿವ್ಯಾ ಸುರೇಶ್ ಅವರಿಂದ ಭರತ ನಾಟ್ಯ ಪ್ರದರ್ಶನವಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಕಾರ್ಯದರ್ಶಿ ಪ್ರಸನ್ನಾಚಾರ್ಯ ತಿಳಿಸಿದ್ದಾರೆ.

ಕೇರಳ ರಾಜ್ಯಪಾಲರು ಉಡುಪಿಗೆ

Advertisement

ಶ್ರೀಕೃಷ್ಣ ಮಾಸೋತ್ಸವ ಸಮಾರೋಪ ಸಮಾರಂಭ ಸಂಜೆ 5ರಿಂದ ರಾಜಾಂಗಣದಲ್ಲಿ ನಡೆಯಲಿದ್ದು, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅಭ್ಯಾಗತರಾಗಿ ಆಗಮಿಸಲಿದ್ದಾರೆ.

ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಡಾ ಮಂಜುನಾಥ ಭಂಡಾರಿ ಮತ್ತು ಪ್ರತಾಪಸಿಂಹ ನಾಯಕ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮತ್ತು ವಿನಯಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಪಡುಬಿದ್ರಿ ತರಂಗಿಣಿ ಮಿತ್ರ ಮಂಡಳಿಯ ಹರೀಶ್ ಭಟ್ ಮತ್ತು ಪ್ರಭಾಕರ ಅಡಿಗ ಮಂಗಳೂರು ಅವರಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next