Advertisement

Udupi: ವೈಭವದ ಮಕರಸಂಕ್ರಾಂತಿ ಉತ್ಸವ

12:07 AM Jan 15, 2024 | Team Udayavani |

ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ರವಿವಾರ ಮಕರ ಸಂಕ್ರಾಂತಿಯಂದು ಬ್ರಹ್ಮರಥ ಸಹಿತ ಮೂರು ತೇರುಗಳ ಉತ್ಸವ ವೈಭವದಿಂದ ಜರಗಿತು.

Advertisement

ಮೂರು ರಥಗಳಲ್ಲಿ ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ, ಚಂದ್ರಮೌಳೀಶ್ವರ ದೇವರ ಉತ್ಸವ ಮೂರ್ತಿಗಳನ್ನು ಪೂಜಿಸಿ ಉತ್ಸವ ನಡೆಸಲಾಯಿತು. ಉತ್ಸವದಲ್ಲಿ ಪಲಿಮಾರು ಹಿರಿಯ, ಕಿರಿಯ, ಸೋದೆ, ಶಿರೂರು, ಅದಮಾರು ಕಿರಿಯ, ಕಾಣಿಯೂರು ಸ್ವಾಮೀಜಿಯವರು ಪಾಲ್ಗೊಂಡಿದ್ದರು.

ಮಧ್ವಸರೋವರದಲ್ಲಿ ತೆಪ್ಪೋತ್ಸವ ನಡೆದ ಬಳಿಕ ರಥೋತ್ಸವ ನಡೆಯಿತು.

ವಿದ್ಯುದ್ದೀಪಗಳು ಮತ್ತು ಆಕರ್ಷಕ ಸುಡು ಮದ್ದುಗಳಿಂದಾವೃತಗೊಂಡ ರಥಬೀದಿಯಲ್ಲಿ ಮೂರು ರಥಗಳ ಉತ್ಸವ ಸಂಪನ್ನಗೊಂಡಿತು. ಉತ್ಸವ ಅರ್ಧ ಸುತ್ತು ಬಂದ ಬಳಿಕ ಸುಡು ಮದ್ದುಗಳ ಪ್ರದರ್ಶನ ನಡೆಯಿತು.

ಇಂದು ಚೂರ್ಣೋತ್ಸವ
ಸೋಮವಾರ ಬೆಳಗ್ಗೆ ಚೂರ್ಣೋತ್ಸವ, ಅವಭೃಥ ಸ್ನಾನ ನಡೆಯಲಿದೆ. ಜ. 18ರಂದು ಪುತ್ತಿಗೆ ಸ್ವಾಮೀಜಿಯವರ ಪರ್ಯಾಯೋತ್ಸವ ನಡೆಯಲಿದ್ದು ಅದಕ್ಕೆ ಪೂರ್ವ ಭಾವಿಯಾಗಿ ಉಡುಪಿಯತ್ತ ಭಕ್ತರ ಆಗಮನ ಹೆಚ್ಚುತ್ತಿದೆ. ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಅವಧಿ ಇನ್ನು ಕೇವಲ ಮೂರು ದಿನಗಳಷ್ಟೇ ಇವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next