Advertisement

Udupi ಮಲ್ಪೆ ಬೀಚ್‌: ಮಂಡ್ಯದ ಯುವಕ ನೀರುಪಾಲು

12:54 AM Apr 22, 2024 | Team Udayavani |

ಮಲ್ಪೆ: ಮಲ್ಪೆ ಬೀಚ್‌ಗೆ ಪ್ರವಾಸ ಬಂದಿದ್ದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಎ. 21ರಂದು ಮಧ್ಯಾಹ್ನ ಸಂಭವಿಸಿದೆ.

Advertisement

ಮೃತರನ್ನು ಮಂಡ್ಯ ಮೂಲದ ನಾಗೇಂದ್ರ ಪ್ರಸಾದ್‌ ಜಿ. ಆರ್‌. (21) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಲಿಫ್ಟ್‌ ಅಪರೇಟರ್‌ ಅಗಿದ್ದರು ಎನ್ನಲಾಗಿದೆ.

ಒಟ್ಟು ಐವರು ಸೇ°ಹಿತರು ರವಿವಾರ ಮಲ್ಪೆ ಬೀಚ್‌ಗೆ ಬಂದಿದ್ದು, ಇವರು ನೀರಿನಲ್ಲಿ ಆಡುತ್ತಿದ್ದಾಗ ನಾಗೇಂದ್ರ ಅವರು ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದರು. ತತ್‌ಕ್ಷಣ ಧಾವಿಸಿ ಬಂದ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು ಮೇಲಕ್ಕೆತ್ತಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದರು. ಆದರೆ ತೀವ್ರ ಅಸ್ವಸ್ಥಗೊಂಡಿದ್ದ ಅವರು ದಾರಿ ಮಧ್ಯೆಯೇ ಕೊನೆಯುಸಿರೆಳೆದರು. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next