Advertisement

ಮರಳುಗಾರಿಕೆಗೆ ಅನುಮತಿ ನಕಾರ,ಪ್ರತಿಭಟನೆ;ಹೃದಯಾಘಾತಕ್ಕೆ ವ್ಯಕ್ತಿ ಸಾವು

06:26 PM Oct 26, 2018 | Sharanya Alva |

ಉಡುಪಿ:ಮರಳುಗಾರಿಕೆಯನ್ನು ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಪುವಿನ ಹೆಜಮಾಡಿ ನಿವಾಸಿ ಮೊಹಮ್ಮದ್ ಹನೀಫ್(42ವರ್ಷ) ಎಂಬವರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ಮರಳುಗಾರಿಕೆ ಸ್ಥಗಿತಗೊಂಡಿದ್ದರಿಂದ ಕರಾವಳಿ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾಗಿ ಅರ್ಧಕ್ಕೆ ನಿಂತಿದ್ದರೆ, ಮತ್ತೊಂದೆಡೆ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರದಾಡುವಂತಾಗಿದೆ. ಜೊತೆಗೆ ಆರ್ಥಿಕ ಮುಗ್ಗಟ್ಟು ತಲೆದೋರಿದೆ.

ಮರಳುಗಾರಿಕೆ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರು.

ಮರಳುಗಾರಿಕೆಗಾಗಿ ಆರು ಲಕ್ಷ ರೂಪಾಯಿ ಸಾಲ ತೆಗೆದುಕೊಂಡು ದೋಣಿ ಹಾಕಿದ್ದ ಹನೀಫ್ ಅವರು ಮಾನಸಿಕ ಒತ್ತಡಕ್ಕೊಳಗಾಗಿದ್ದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next