Advertisement

Udupi: ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ವ್ಯಕ್ತಿ ಸಾವು

01:44 AM Jan 17, 2024 | Team Udayavani |

ಉಡುಪಿ: ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

Advertisement

ಸಂತೆಕಟ್ಟೆಯ ಕೆನೆಟ್‌ ಫೆಲಿಸ್‌ಪಿಂಟೋ (52) ಮೃತರು. 3 ವರ್ಷಗಳಿಂದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇದಕ್ಕಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

ಜ.15ರಂದು ಮನೆಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದರು.ಬಳಿಕ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಹೊಸಾಳ: ನೇಣು ಬಿಗಿದು ಆತ್ಮಹತ್ಯೆ
ಬ್ರಹ್ಮಾವರ: ಹೊಸಾಳ ಗ್ರಾಮದ ನಾಗರಮಠ ರಸ್ತೆ ನಿವಾಸಿ ಶ್ಯಾಮ (38) ಅವರು ಮಂಗಳವಾರ ಮುಂಜಾನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದು ಆತ್ಮಹತ್ಯೆ
ಬ್ರಹ್ಮಾವರ: ಕರ್ಜೆ ಹೆಗ್ಗುಂಜೆಡ್ಡು ನಿವಾಸಿ ಸುನೀಲ್‌ (29) ಅವರು ಮಂಗಳವಾರ ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪಾದಚಾರಿಗೆ ಢಿಕ್ಕಿ; ಗಾಯ
ಕುಂದಾಪುರ: ಗೋಪಾಡಿ ಗ್ರಾಮದ ಬೊಬ್ಬರ್ಯ ದೇವಸ್ಥಾನದ ಹತ್ತಿರ ಹೆದ್ದಾರಿಯಲ್ಲಿ ಪಾದಚಾರಿಗೆ ಕಾರು ಢಿಕ್ಕಿಯಾಗಿದೆ.

ಜಾರ್ಜ್‌ ಅಲ್ಫೆ†àಡ್‌ ಅವರು ಚಲಾಯಿಸುತ್ತಿದ್ದ ಕಾರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಮಣೂರು ಗ್ರಾಮದ ಚಂದ್ರಶೇಖರ (52) ಅವರಿಗೆ ಢಿಕ್ಕಿ ಹೊಡೆದಿದೆ. ಗಾಯಾಳು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next