Advertisement

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದು ತಪ್ಪಲ್ಲ: ಶಾಸಕ ರಘುಪತಿ ಭಟ್

03:38 PM Dec 10, 2021 | Team Udayavani |

ಉಡುಪಿ: ಮಧ್ಯಾಹ್ನದ ಊಟದ ಅಂಗವಾಗಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಸರಕಾರದ ನಿರ್ಧಾರವನ್ನು ಬೆಂಬಲಿಸುವುದಾಗಿ ಶಾಸಕ ಕೆ.ರಘುಪತಿ ಭಟ್ ಶುಕ್ರವಾರ ಹೇಳಿದ್ದಾರೆ.

Advertisement

ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆಗಳನ್ನು ಬಡಿಸುವುದು ತಪ್ಪಲ್ಲ, ಆದರೆ ಮೊಟ್ಟೆಗಳನ್ನು ವಿತರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಸಸ್ಯಾಹಾರಿ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಬಾರದು ಎಂದರು.

ಇತರರಿಗೆ ಅನಾನುಕೂಲವಾಗಿದೆ ಎಂಬ ಕಾರಣಕ್ಕಾಗಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುವ ಆಲೋಚನೆಯನ್ನು ಕೈಬಿಡುವುದು ಸರಿಯಲ್ಲ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next