Advertisement

ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬಂದಿ ವೇತನಕ್ಕೆ 50 ಲ.ರೂ. ಹಸ್ತಾಂತರ

09:03 PM Aug 15, 2021 | Team Udayavani |

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬಂದಿ ಸೇರಿದಂತೆ ಎಲ್ಲ ವಿಭಾಗದ ಸಿಬಂದಿಗಳಿಗೆ ಬಾಕಿ ವೇತನ ಪಾವತಿಗೆ ಶಾಸಕ ಕೆ. ರಘುಪತಿ ಭಟ್‌ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಕೆ. ಸುಧಾಕರ್‌ ಹಾಗೂ ಸುವರ್ಣ ಆರೋಗ್ಯ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಜತೆ ಸಭೆ ನಡೆಸಿ ಚರ್ಚಿಸಿರುವ ಫ‌ಲವಾಗಿ ಸುವರ್ಣ ಆರೋಗ್ಯ ಟ್ರಸ್ಟ್‌ನಿಂದ ಮಂಜೂರಾದ 50 ಲ.ರೂ. ಮೊತ್ತವನ್ನು ಶನಿವಾರ ಜಿಲ್ಲಾಸ್ಪತ್ರೆಯಲ್ಲಿ ಶಾಸಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಆಸ್ಪತ್ರೆ ಸಿಬಂದಿಗೆ ವೇತನ ಪಾವತಿಸುವ ನಿರ್ಬಂಧದೊಂದಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಮಧುಸೂದನ್‌ ನಾಯಕ್‌ ಅವರು ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.

Advertisement

ತತ್‌ಕ್ಷಣ ವೇತನ ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ವೈದ್ಯಾಧಿಕಾರಿಗಳಾದ ಡಾ| ಚಂದ್ರಶೇಖರ್‌ ಅಡಿಗ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next