Advertisement

ಅಪಘಾತದಲ್ಲಿ ಗಾಯಗೊಂಡಿದ್ದ ಉಡುಪಿ ನಗರ ಸಭೆಯ ವ್ಯವಸ್ಥಾಪಕ ಸಾವು

11:28 AM Nov 22, 2021 | Team Udayavani |

ಉಡುಪಿ: ನಿನ್ನೆ ನಗರದ ಕುಂಜಿಬೆಟ್ಟು ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ನಗರ ಸಭೆ ವ್ಯವಸ್ಥಾಪಕ ವೆಂಕಟರಮಣಯ್ಯ ಸೋಮವಾರ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Advertisement

ಉಡುಪಿಯ ಕುಂಜಿಬೆಟ್ಟು ಬಳಿ ರಾ.ಹೆ 169(ಎ) ರಲ್ಲಿ ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದಾಗ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ ಓಮಿನಿ ಕಾರು ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು, ತಲೆಗೆ ಮತ್ತು ಬೆನ್ನಿಗೆ ಗಂಭೀರ ಗಾಯವಾಗಿತ್ತು. ಅವರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಓಮಿನಿಚಾಲಕನ ದುಡುಕುತನ ಮತ್ತು ನಿರ್ಲಕ್ಷವೇ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next