Advertisement

Udupi: ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ

03:17 PM Aug 09, 2024 | Team Udayavani |

ಉಡುಪಿ: ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆಯ ನಾಗಾಲಯದಲ್ಲಿರುವ ಶ್ರೀನಾಗರಾಜ ನಾಗರಾಣಿಯರ ಸನ್ನಿಧಾನದಲ್ಲಿ ಆ.9ರ ಶುಕ್ರವಾರ ನಾಗರ ಪಂಚಮಿ ಪೂಜೆ ನೆರವೇರಿತು.

Advertisement

ನಾಗರ ಪಂಚಮಿಯ ಪ್ರಯುಕ್ತ ಕ್ಷೇತ್ರದ ಧರ್ಮದ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಚಕ ಅನೀಶ್ ಆಚಾರ್ಯರ ನೇತೃತ್ವದಲ್ಲಿ ಸಾಮೂಹಿಕ ನಾಗ ತನು ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ ಸಂಪನ್ನಗೊಂಡಿತು.

ಪೂಜೆ-ಸೇವೆಗಳ ಬಳಿಕ ಮಧ್ಯಾಹ್ನ ಭಕ್ತರು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು ಎಂದು ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next