Advertisement

Udupi Nejar Case ಜಾಮೀನು ಅರ್ಜಿ: ಆಕ್ಷೇಪಣೆಗೆ ಅವಕಾಶ

12:15 AM Dec 21, 2023 | Team Udayavani |

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗುಲೆ (39) ಜಾಮೀನು ಕೋರಿ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶವನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಡಿ.21ಕ್ಕೆ ಮುಂದೂಡಿದೆ.

Advertisement

ಡಿ.14ರಂದು ಆರೋಪಿ ಪ್ರವೀಣ್‌ ಚೌಗುಲೆ ಜಾಮೀನಿಗೆಅರ್ಜಿ ಸಲ್ಲಿಸಿದ್ದು, ಡಿ. 20ರಂದು ಆಕ್ಷೇಪಣೆ ಸಲ್ಲಿಸಲು ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಅವರಿಗೆ ನ್ಯಾಯಾಲಯ ಅವಕಾಶ ನೀಡಿತ್ತು. ಆದರೆ ಬುಧವಾರ ಅವರು ರಜೆ ಮಾಡಿರುವ ಹಿನ್ನೆಲೆಯಲ್ಲಿ ಕುಂದಾಪುರದ ಸರಕಾರಿ ಅಭಿಯೋಜಕಿ ಇಂದಿರಾ ನಾಯಕ್‌, ನ್ಯಾಯಾಲಯಕ್ಕೆ ಹಾಜರಾಗಿ ಆಕ್ಷೇಪಣೆ ಸಲ್ಲಿಸಲು ಡಿ.21ರಂದು ದಿನಾಂಕ ನೀಡುವಂತೆ ಕೋರಿದರು.

ಈ ಹಿನ್ನೆಲೆ ಯಲ್ಲಿ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸುವ ದಿನಾಂಕವನ್ನು ಡಿ.21ಕ್ಕೆ ಮುಂದೂಡಿ ಆದೇಶ ನೀಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next