Advertisement

Udupi: ನೇಜಾರಿನಲ್ಲಿ ನಾಲ್ವರ ಕೊಲೆ ಪ್ರಕರಣ ಆ.24ಕ್ಕೆ ವಿಚಾರಣೆ ಮುಂದೂಡಿಕೆ

09:30 PM Aug 27, 2024 | Team Udayavani |

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಮತ್ತೆ ಆ. 24ಕ್ಕೆ ಮುಂದೂಡಿ ಆದೇಶ ನೀಡಿದೆ.

Advertisement

ಕಳೆದ ಬಾರಿ ಮುಂದಿನ ವಿಚಾರಣೆಯನ್ನು ಆ. 24ಕ್ಕೆ ನಿಗದಿಪಡಿಸಿದ್ದ ಹಿನ್ನೆಲೆಯಲ್ಲಿ ಅಂದು ಆರೋಪಿ ಪ್ರವೀಣ್‌ ಚೌಗುಲೆಯನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ಪರ ವಕೀಲ ಗುರುರಾಜ್‌ ಜಿ.ಎಸ್‌. ಹಾಜರಿದ್ದರು. ಈ ವೇಳೆ ಆರೋಪಿಯು ನ‌ನ್ನನ್ನು ಕ್ವಾರಂಟೈನ್‌ ಜೈಲಿನಲ್ಲಿ ಇರಿಸಲಾಗಿದೆ. ನಾನು ಆಹಾರ ಮತ್ತು ನೀರನ್ನು ತೆಗೆದುಕೊಳ್ಳುತ್ತಿಲ್ಲ ಎಂದು ನ್ಯಾಯಾಧೀಶರ ಮುಂದೆ ತಿಳಿಸಿದ್ದು, ನನ್ನನ್ನು ಮುಖ್ಯ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆತ ಮನವಿ ಮಾಡಿದ್ದಾನೆ.

ಆರೋಪಿ ಅಹವಾಲು ಸಲ್ಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಜೈಲು ಅಧೀಕ್ಷಕರಿಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ ಎದುರು ಹಾಜರಾಗುವಂತೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಸೂಚಿಸಿದರು. ಅದರಂತೆ ಹಾಜರಾದ ಜೈಲು ಅಧೀಕ್ಷರರು, ಮುಖ್ಯ ಜೈಲಿನಲ್ಲಿ ಆರೋಪಿಗೆ ಬೆದರಿಕೆ ಇರುವುದರಿಂದ ಸುರಕ್ಷತೆ ದೃಷ್ಠಿಯಿಂದ ಅಲ್ಲಿ ಇರಿಸಲಾಗಿದೆ ಎಂದರು. ಆರೋಪಿ ಉದ್ದೇಶಪೂರ್ವಕವಾಗಿ ಆಹಾರ ಮತ್ತು ನೀರನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಜೈಲು ಅಧೀಕ್ಷಕರು ತಿಳಿಸಿದರು.

ಬಳಿಕ ನ್ಯಾಯಾಧೀಶರು, ಆರೋಪಿಗೆ ಆಹಾರ ಮತ್ತು ನೀರನ್ನು ತೆಗೆದು ಕೊಳ್ಳುವಂತೆ ನಿರ್ದೇಶಿಸಿದರು. ಆರೋಪಿಯ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕು ಮತ್ತು ಅಗತ್ಯವಿದ್ದರೆ ಅವರಿಗೆ ವೈದ್ಯಕೀಯ ನೆರವು ನೀಡಬೇಕು ಎಂದು ನ್ಯಾಯಾಧೀಶರು ಜೈಲು ಅಧೀಕ್ಷಕರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next