Advertisement

Udupi Nejaru Case ಪ್ರವೀಣ್‌ ಚೌಗಲೆ ಸೆಂಟ್ರಲ್‌ ಜೈಲಿಗೆ

11:48 PM Nov 27, 2023 | Team Udayavani |

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸೋಮವಾರ ರವಾನಿಸಲಾಗಿದೆ.

Advertisement

ಪೊಲೀಸ್‌ ಕಸ್ಟಡಿಯಲ್ಲಿದ್ದ ಆತನನ್ನು ನ.23ರಂದು ಪ್ರಕರಣದ ತನಿಖಾಧಿಕಾರಿ ಮಂಜುನಾಥ ಗೌಡ ಅವರು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಅದರಂತೆ ಡಿ.5 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿತ್ತು. ಬಳಿಕ ಆತನನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗ್ರಹಕ್ಕೆ ಕಳುಹಿಸಲಾಗಿತ್ತು.

ಭದ್ರತೆಗಾಗಿ ಇಬ್ಬರು ಪೊಲೀಸರನ್ನೂ ನಿಯೋಜಿಸಲಾಗಿತ್ತು. ಆದರೆ ಮತ್ತಷ್ಟು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮೇಲಾಧಿಕಾರಿಗಳ ಅನುಮತಿ ಪಡೆದು ಕೇಂದ್ರ ಕಾರಾಗ್ರಹಕ್ಕೆ ಕಳುಹಿಸಲಾಗಿದೆ.

ಮುಂದಿನ ವಿಚಾರಣೆ ಪ್ರಕ್ರಿಯೆಗಳು ವೀಡಿಯೋ ಸಂವಾದದ ಮೂಲಕ ನಡೆಯಲಿದೆ. ಚಾರ್ಜ್‌ ಶೀಟ್‌ ಸಲ್ಲಿಸುವಾಗ ಆತನನ್ನು ಕರೆತರಲಾಗುತ್ತದೆ. ಉಳಿದಂತೆ ಎಲ್ಲ ಪ್ರಕ್ರಿಯೆಗಳೂ ವಿಸಿ ಮೂಲಕ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next