Advertisement

Udupi ನೇಜಾರು ಕೊಲೆ ಪ್ರಕರಣ: ಚೌಗುಲೆ ನ್ಯಾಯಾಂಗ ಬಂಧನ ವಿಸ್ತರಣೆ

10:09 PM Jan 01, 2024 | Team Udayavani |

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್‌ ಚೌಗುಲೆಯ ನ್ಯಾಯಾಂಗ ಬಂಧನ ಅವಧಿಯನ್ನು ಜ. 12ರ ವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ ಡಿ. 30ರಂದು ಆದೇಶಿಸಿದೆ.

Advertisement

ನ್ಯಾಯಾಲಯವು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ. 30ರ ವರೆಗೆ ವಿಸ್ತರಿಸಿದ್ದು, ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿ ಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶೆ ದೀಪಾ ಅವರ ಮುಂದೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್‌.ಎಂ. ನದಾಫ್ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next