Advertisement

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

12:23 AM May 25, 2024 | Team Udayavani |

ಉಡುಪಿ: ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್‌ ತಲುಪಿಲ್ಲ. ತಲುಪಿದ ಕೂಡಲೇ ಉತ್ತರಿಸುವೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಹೇಳಿದರು.

Advertisement

ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ ಸಂಬಂಧ ಅವರು ಪ್ರತಿಕ್ರಿಯೆ ನೀಡಿ, ಪಕ್ಷದಿಂದ ಆಗಿರುವ ತಪ್ಪುಗಳು ಏನೇನು ಮತ್ತು ಸಾಮಾನ್ಯ ಕಾರ್ಯಕರ್ತನೊಬ್ಬನನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ತಿಳಿಸುವೆ ಎಂದ ಅವರು, ಸ್ಪರ್ಧೆಯಿಂದ ಹಿಂದೆ ಸರಿಯೆನು ಎಂದರು.

ಈಗಾಗಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚಾರ ಆರಂಭಿಸಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಪಕ್ಷದಿಂದ ಉಚ್ಚಾಟನೆ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಉದಯವಾಣಿಗೆ ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next