Advertisement

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

12:31 AM Jul 03, 2024 | Team Udayavani |

ಉಡುಪಿ: ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.
ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾ ಗುವ ಸಂಭವ ಇರುವುದರಿಂದ ಕಡಲ ತೀರ, ನದಿ, ಹಿನ್ನೀರು, ಬೋಟಿಂಗ್‌ ಹಾಗೂ ಇತರ ಪ್ರವಾಸೋದ್ಯಮ ಜಲಸಾಹಸ ಕ್ರೀಡೆ ಹಾಗೂ ಚಟುವಟಿಕೆಗಳನ್ನು ನಡೆಸದಂತೆ ಈ ಹಿಂದೆ ಸೂಚಿಸಲಾಗಿದ್ದರೂ ಸಹ ಕೆಲವು ಕಡೆಗಳಲ್ಲಿ ಇಲಾಖೆಯಿಂದ ಅನುಮೋದಿಸಿ ರುವಂತೆ ಖಾಸಗಿ ಸಹಭಾಗಿತ್ವದವರು ತಮ್ಮ ಜಲಸಾಹಸ ಚಟುವಟಿಕೆಗಳನ್ನು ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿವೆ.
ಆದ್ದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಜಲಸಾಹಸ ಚಟುವಟಿಕೆ ಗಳಾದ ಬೋಟಿಂಗ್‌, ಕಯಾಕಿಂಗ್‌, ಸರ್ಫಿಂಗ್‌ ಹಾಗೂ ಐಲ್ಯಾಂಡ್‌ಗಳಲ್ಲಿ ಒಂದು ದಿನದ ಪ್ರವಾಸೋದ್ಯಮ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೆ ಕಡ್ಡಾಯ ವಾಗಿ ಸ್ಥಗಿತಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next