Advertisement

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

09:06 PM Oct 23, 2024 | Team Udayavani |

ಮಂಗಳೂರು: ಉಡುಪಿಯಲ್ಲಿ ನಡೆಯಲಿರುವ ಮೂರು ದಿನಗಳ ಪ್ರಾಚ್ಯ ವಿದ್ಯಾ ಸಮ್ಮೇಳನದ ಉದ್ಘಾಟನೆಗೆ ಪೂಜ್ಯ ಪರ್ಯಾಯ ಶ್ರೀಪಾದರ ಆಹ್ವಾನದ ಮೇರೆಗೆ ಆಗಮಿಸಿದ ಯೋಗಗುರು ಬಾಬಾ ರಾಮದೇವ್ ,ಪೂಜ್ಯ ಶ್ರೀ ಬಾಲಕೃಷ್ಣಾಚಾರ್ಯ, ಪೂಜ್ಯ ಮಾತಾ ಸಾಧ್ವೀ ದೇವಪ್ರಿಯಾ ಮತ್ತಿತರ ಗಣ್ಯರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು.

Advertisement

ನೆರೆದ ಯೋಗ ಮಾತೆಯರು ಆರತಿಯನ್ನು ಬೆಳಗಿದರು. ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ  ಪ್ರಸನ್ನಾಚಾರ್ಯ, ವೇದಘೋಷದ ನಡುವೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಉದ್ಯಮಿ ಶಾಂತೀಶ್ ಶೆಟ್ಟಿ, ರಾಘವೇಂದ್ರ ಭಟ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next