Advertisement

Udupi; ಮರೀಚಿಕೆಯಾದ ಸಂವಿಧಾನ ಪೀಠಿಕೆ ಓದು

11:19 PM Jan 05, 2024 | Team Udayavani |

ಉಡುಪಿ: ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದು ಕಡ್ಡಾಯ ಮಾಡಿದ್ದರೂ ಬಹುತೇಕ ಶಾಲೆಗಳಲ್ಲಿ ಇದು ನಿತ್ಯವೂ ನಡೆಯುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

Advertisement

ಎಲ್ಲ ಶಾಲೆಗಳಲ್ಲಿ ನಿತ್ಯವೂ ಪ್ರಾರ್ಥನೆ ಅಥವಾ ನಾಡಗೀತೆಯ ಅನಂತರ ಸಂವಿಧಾನ ಪೀಠಿಕೆಯನ್ನು ಓದಬೇಕು ಎಂಬ ನಿರ್ದೇಶನವನ್ನು ರಾಜ್ಯ ಸರಕಾರದ ಸೂಚನೆಯ ಮೇರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಿಂದ ನೀಡಲಾಗಿತ್ತು.

ವಿದ್ಯಾರ್ಥಿಗಳು ಸಹಿತ ಎಲ್ಲರೂ ಸಂವಿಧಾನ ಪೀಠಿಕೆ ಓದಬೇಕು ಎನ್ನುವ ನಿಟ್ಟಿನಲ್ಲಿ ಸರಕಾರ ದೊಡ್ಡ ಕಾರ್ಯಕ್ರಮವನ್ನು ನಡೆಸಿತ್ತು. ಅನಂತರದಲ್ಲಿ ಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ಕೆಲವು ದಿನಗಳ ಮಟ್ಟಿಗೆ ಸಂವಿಧಾನ ಪೀಠಿಕೆ ಓದುವ ಪ್ರಕ್ರಿಯೆ ನಿತ್ಯವೂ ನಡೆದಿತ್ತು. ಆದರೆ ಇದೀಗ ಬಹುತೇಕ ಶಾಲೆಗಳು ನಿಲ್ಲಿಸಿವೆ. ಇನ್ನು ಕೆಲವು ಶಾಲೆಗಳಲ್ಲಿ ವಾರಕ್ಕೆ ಒಮ್ಮೆ ಮಾತ್ರ ಓದಲಾಗುತ್ತಿದೆ.

ಪ್ರತಿಯೊಬ್ಬರು ಸಂವಿಧಾನದ ಆಶಯ ವನ್ನು ಅರಿಯಬೇಕು ಮತ್ತು ವಿದ್ಯಾರ್ಥಿ ಸಮೂಹಕ್ಕೆ ಈ ಬಗ್ಗೆ ಹೆಚ್ಚು ಅರಿವು ಮೂಡಿಸುವ ನಿಟ್ಟಿನಲ್ಲಿ ಸಂವಿಧಾನ ಪೀಠಿಕೆ ಓದು ಆರಂಭಿಸಲಾಗಿತ್ತು. ಜಿಲ್ಲಾಡಳಿತ ಸಹಿತ ಡಿಡಿಪಿಐ ಕಚೇರಿಯಿಂದಲೂ ಶಾಲೆಗಳಿಗೆ ಸೂಚನೆ ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next