Advertisement

ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್ ಡಯಾಸ್ ನಿಧನ

11:32 AM Mar 25, 2021 | Team Udayavani |

ಉಡುಪಿ: ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಯಾಸ್ (88) ಅವರು ಬುಧವಾರ  ತಡ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Advertisement

ಕಳೆದ ಎರಡು ದಶಕಗಳಿಂದ ಆರ್ ಎಲ್ ಡಯಾಸ್ ರವರು ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿ ಹಾಗೂ ಅಧ್ಯಕ್ಷರಾಗಿದ್ದು ಉಡುಪಿ ಭಾಗದ ರೈಲ್ವೆ ಸೇರಿದಂತೆ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿ ಕೆಲಸ ಮಾಡಿಸುವಲ್ಲಿ ಯಶಸ್ಸು ಕಂಡಿದ್ದರು.

ಉಡುಪಿ ರೈಲ್ವೆ ಯಾತ್ರಿ ಸಂಘದ ನೇತೃತ್ವದಲ್ಲಿ ಸಂಘಟಿತ ಹೋರಾಟದಿಂದ ಉಡುಪಿ ಭಾಗದಲ್ಲಿ ಹಲವಾರು ರೈಲ್ವೆ ಯೋಜನೆಗಳು ಜಾರಿಗೊಳ್ಳಲು ಅವರು ಮಹತ್ವಪೂರ್ಣ ಪಾತ್ರ ವಹಿಸಿದ್ದರು. ರೈಲ್ವೆ ಸಂಬಂದಿತ ಹೋರಾಟಗಳ ಹೊರತಾಗಿ ಇತರ ಕ್ಷೇತ್ರಗಳಲ್ಲೂ ಡಯಾಸ್ ರವರ ಸಾಮಾಜಿಕ ಕಳಕಳಿ ನಿರಂತರವಾಗಿದ್ದು ಪರ್ಕಳ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಸ್ಪಂದನೆ, ಉಡುಪಿಯಲ್ಲಿ ನರ್ಮ್ ಬಸ್ ಓಡಾಟದ ಹಿಂದೆ ಅವರ ಪಾತ್ರ, ಈಗ ಚಾಲನೆಯಲ್ಲಿರುವ  ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಅವರು  ನಡೆಸಿದ ಹೋರಾಟಗಳು ಇತ್ಯಾದಿ  ಜನ ಮಾನಸದಲ್ಲಿ ನೆಲೆಯೂರಿದೆ.

ಆರ್ ಎಲ್ ಡಯಾಸ್ ಅವರು ಪತ್ನಿ, ನಾಲ್ವರು ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅವರ ಅಂತಿಮ ಸಂಸ್ಕಾರ ಭಾನುವಾರ ಮಧ್ಯಾಹ್ನ 3.30 ಗಂಟೆಗೆ ಮಣಿಪಾಲ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next