Advertisement

Udupi ರಸ್ತೆ ಅಪಘಾತ: ಓರ್ವ ಸಾವು; ಇಬ್ಬರಿಗೆ ಗಾಯ  

08:44 PM Aug 25, 2024 | Team Udayavani |

ಉಡುಪಿ: ಸಂತೆಕಟ್ಟೆ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್‌ ಸವಾರರೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

Advertisement

ಮೃತರನ್ನು ಬೈಕ್‌ ಸವಾರ ರವಿರಾಜ್‌ ಎಂದು ಗುರುತಿಸಿದ್ದು, ಮಧು ಹಾಗೂ ನಿತೇಶ್‌ ಘಟನೆಯಿಂದ ಗಾಯಗೊಂಡಿದ್ದಾರೆ.
ರವಿವಾರ ಬೆಳಗ್ಗೆ ಸಂತೆಕಟ್ಟೆ ರವಿರಾಜ್‌ ಸಂತೆಕಟ್ಟೆ ಕಡೆಯಿಂದ ಮಲ್ಪೆ ಕಡೆಗೆ ಹೋಗುವುದಕ್ಕೆ ಬೈಕ್‌ನ ವೇಗವನ್ನು ಕಡಿಮೆ ಮಾಡಿ ನಿಲ್ಲಿಸಿದ್ದರು.

ಅದೇ ವೇಳೆಗೆ ಸ್ಕೂಟರ್‌ ಸವಾರ ಮಧು ತನ್ನ ಸ್ಕೂಟರ್‌ ಅನ್ನು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ರವಿರಾಜ್‌ ಚಲಾಯಿಸುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ರವಿರಾಜ್‌ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next