Advertisement

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

12:49 AM Sep 25, 2024 | Team Udayavani |

ಉಡುಪಿ: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿಯಿಂದ ಹೆದ್ದಾರಿ ಸಂಪೂರ್ಣ ಹಾಳಾಗಿದ್ದು, ಸರ್ವೀಸ್‌ ರಸ್ತೆಯೂ ಸಂಚಾರ ದಟ್ಟಣೆಯಿಂದ ಕೂಡಿದ್ದು ನಿತ್ಯವೂ ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಉದಯವಾಣಿ ಈ ಸಂಬಂಧ ಸರಣಿ ವರದಿ ಪ್ರಕಟಿಸಿದ ಬೆನ್ನೆಲ್ಲೆ ಸ್ಥಳಕ್ಕೆ ಭೇಟಿ ನೀಡಿದ ಅವರು ಓವರ್‌ಪಾಸ್‌ ಕಾಮಗಾರಿಯನ್ನು ತ್ವರಿತವಾಗಿ ನಡೆಸಲು ಸೂಚನೆ ನೀಡಿದರು.

ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಗಳನ್ನು ಸರಿಪಡಿಸಿ ಕೊಡುವಂತೆಯೂ ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.

ಭೇಟಿಯ ಸಂದರ್ಭದಲ್ಲಿ ಸ್ಥಳೀಯರು ತಮ್ಮ ಸಮಸ್ಯೆಗಳನ್ನು ಸಂಸದರ ಮುಂದಿಟ್ಟಿದ್ದಾರೆ. ಓವರ್‌ಪಾಸ್‌, ಸರ್ವೀಸ್‌ ರಸ್ತೆಯ ಅವ್ಯವಸ್ಥೆಯಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳ ಬಗ್ಗೆ ಸ್ಥಳೀಯರು ವಿವರಿಸಿದರು. ಈ ಹಿಂದೆ ಜಿಲ್ಲಾಧಿಕಾರಿ, ಎಸ್‌ಪಿ ಅವರೊಂದಿಗೂ ಭೇಟಿ ನೀಡಿರುವ ಬಗ್ಗೆ ಸಂಸದರು ಮಾಹಿತಿ ಹಂಚಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next