Advertisement

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಹಿಂಪಡೆದ ಶಿರೂರು ಶ್ರೀ

07:10 PM Apr 27, 2018 | udayavani editorial |

ಉಡುಪಿ : ಇಲ್ಲಿನ ಶ್ರೀ ಶೀರೂರು ಮಠಾಧೀಶರಾದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಇಂದು ಶುಕ್ರವಾರ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡರು. 

Advertisement

ಸ್ವಾಮೀಜಿಯವರು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ಈ ಮೊದಲು  ನಾಮಪತ್ರ ಸಲ್ಲಿಸಿದ್ದರು.

ತಮ್ಮ ನಾಮಪತ್ರ ಹಿಂದೆಗತಕ್ಕೆ ಕಾರಣ ತಿಳಿಸಿ ಮಾಧ್ಯಮಗಳಿಗೆ ಪತ್ರ ಬರೆದಿರುವ ಸ್ವಾಮೀಜಿಯವರು ಭಾರತೀಯ ಜನತಾ ಪಕ್ಷದಿಂದ ತಮಗೆ ನಿರಂತರವಾಗಿ ಬಂದ ಕೋರಿಕೆಯನ್ನು ಪರಿಗಣಿಸಿ ತಾನು ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿರುವುದಾಗಿ ಪತ್ರದಲ್ಲಿ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾವು ಅವರ ಅಂತಾರಾಷ್ಟ್ರೀಯ ಯೋಗ ದಿನ ಮತ್ತು ಸ್ವಚ್ಚ  ಭಾರತ ಅಭಿಯಾನದಂತಹ ಕಾರ್ಯಕ್ರಮಗಳಿಗಾಗಿ ಬೆಂಬಲಿಸುತ್ತೇವೆ ಎಂದು ಸ್ವಾಮೀಜಿ ಹೇಳಿದ್ದಾರೆ.  

Advertisement

Udayavani is now on Telegram. Click here to join our channel and stay updated with the latest news.

Next