Advertisement

ಉಡುಪಿ: SSLC ಪರೀಕ್ಷೆ ಪೂರ್ವಭಾವಿ ಸಿದ್ಧತೆ: ಜಿಲ್ಲಾ ಪಂಚಾಯತ್ ಅಧ್ಯಕ್ಷರಿಂದ ಪರಿಶೀಲನೆ

01:47 PM Jun 23, 2020 | mahesh |

ಉಡುಪಿ: ಹಲವಾರು ಆತಂಕಗಳ ನಡುವೆ ರಾಜ್ಯ ಸರಕಾರ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವ ಕುರಿತು ತೀರ್ಮಾನ ಕೈಗೊಂಡಿದ್ದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಇವರು ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸರಕಾರದ ಕೋವಿಡ್ 19 ಮಾರ್ಗಸೂಚಿಯಂತೆ ಪರೀಕ್ಷಾ ಕೇಂದ್ರದಲ್ಲಿ ತೆಗೆದುಕೊಂಡ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರದದ ಸ್ಯಾನಿಟೈಸಿಂಗ್, ಮಾರ್ಕಿಂಗ್, ಕೊಠಡಿಗಳ ಸ್ವಚ್ಛತೆ ಬಗ್ಗೆ ಪರಿಶೀಲಿಸಿ ಮುಖ್ಯವಾಗಿ ಶೌಚಾಲಯದ ಸ್ವಚ್ಛತೆ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ನಿರ್ದೇಶಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.

Advertisement

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಶೀಲಾ ಕೆ. ಶೆಟ್ಟಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಮಿತ್ ಶೆಟ್ಟಿ ಕೌಡೂರು, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಶಶಿಕಾಂತ್ ಪಡುಬಿದ್ರಿ, ಶ್ರೀಮತಿ ಗೀತಾಂಜಲಿ ಎಂ ಸುವರ್ಣ, ಶ್ರೀಮತಿ ರೇಷ್ಮಾ ಉದಯ ಶೆಟ್ಟಿ, ಶ್ರೀ ಶೇಷಶಯನ ಕಾರಿಂಜ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next