Advertisement

ಉಡುಪಿ ತಾಲೂಕು ಮಟ್ಟದ ಕಂದಾಯ ಅದಾಲತ್‌: 85 ಪ್ರಕರಣ ವಿಲೇವಾರಿ

08:19 PM Jul 13, 2019 | Team Udayavani |

ಉಡುಪಿ: ಉಡುಪಿ ತಾಲೂಕಿನ ಪಿಂಚಣಿ ಮತ್ತು ಕಂದಾಯ ಅದಾಲತ್‌ ಕಾರ್ಯಕ್ರಮ ಉಡುಪಿಯ ಬನ್ನಂಜೆಯಲ್ಲಿರುವ ಹಳೆಯ ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಕುಂದಾಪುರ ಸಹಾಯಕ ಆಯುಕ್ತ ಎಸ್‌.ಎಸ್‌ ಮಧುಕೇಶ್ವರ್‌ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಕಂದಾಯ ಅದಾಲತ್‌ ಸೂಕ್ತ ವೇದಿಕೆಯಾಗಿದೆ. ವಿಶೇಷವಾಗಿ ದೀರ್ಘ‌ಕಾಲದಿಂದ ಬಾಕಿ ಇರುವ ಪ್ರಕರಣಗಳನ್ನು ಇಲ್ಲಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.

ತಹಶೀಲ್ದಾರ್‌ ಪ್ರದೀಪ್‌ ಕುರುಡೇಕರ್‌, ಉಪ ತಹಶೀಲ್ದಾರ್‌ ಸುರೇಂದ್ರ ಬಾಬು, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿ ಕಾರಿಗಳು ಹಾಜರಿದ್ದರು.ಪಿಂಚಣಿ ಅದಾಲತ್‌ನಲ್ಲಿ 22 ಫ‌ಲಾನುಭವಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಹಾಗೂ ಕಂದಾಯ ಅದಾಲತ್‌ನಲ್ಲಿ 85 ಪ್ರಕರಣಗಳನ್ನು ವಿಲೇವಾರಿ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next