Advertisement

ನಾಳೆ ಉಡುಪಿ, ದ.ಕ. ಬಿಜೆಪಿ ಅಧ್ಯಕ್ಷರ ಪದಗ್ರಹಣ

11:37 PM Feb 22, 2020 | Team Udayavani |

ಉಡುಪಿ: ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಅವರ ಪದಗ್ರಹಣ ಸಮಾರಂಭ ಫೆ. 24ರ ಸಂಜೆ 4 ಗಂಟೆಗೆ ಹೊಟೇಲ್‌ ಕಿದಿಯೂರಿನ ಶೇಷಶಯನ ಸಭಾಭವನದಲ್ಲಿ ನಡೆಯ ಲಿದೆ. ಇದಕ್ಕೂ ಮುನ್ನ ಅಪರಾಹ್ನ 3.30ಕ್ಕೆ ಹಿಂದಿನ ಡಯಾನ ಸರ್ಕಲ್‌ನಿಂದ ಕಿದಿಯೂರು ಹೊಟೇಲ್‌ ವರೆಗೆ ಮೆರವಣಿಗೆ ನಡೆಯಲಿದೆ.

Advertisement

ಸಮಾರಂಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ಮೊದಲಾದ ನಾಯಕರು ಪಾಲ್ಗೊಳ್ಳಲಿದ್ದಾರೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಟ್ಟಾರು ರತ್ನಾಕರ ಹೆಗ್ಡೆ ಅವರನ್ನು ಸಮ್ಮಾನಿಸಲಾಗುವುದು. ಜಿಲ್ಲಾ ಸಮಿತಿ ಪದಾಧಿಕಾರಿಗಳ ಪಟ್ಟಿಯನ್ನು ರಾಜ್ಯಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಒಪ್ಪಿಗೆ ಬಂದ ಬಳಿಕ ಪ್ರಕಟಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ಸುರೇಶ್‌ ನಾಯಕ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಾಯಕರಾದ ಕುತ್ಯಾರು ನವೀನ್‌ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್‌, ಶಿವಕುಮಾರ್‌, ರೋಶನ್‌ ಶೆಟ್ಟಿ, ಗುರುಪ್ರಸಾದ ಶೆಟ್ಟಿ, ಪ್ರತಾಪ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.

ದ.ಕ. ಜಿಲ್ಲಾ ಅಧ್ಯಕ್ಷರ ಪದಗ್ರಹಣ
ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಸುದರ್ಶನ ಮೂಡುಬಿದಿರೆ ಹಾಗೂ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಫೆ. 24ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಕುದು¾ಲ್‌ ರಂಗರಾವ್‌ ಪುರಭವನದಲ್ಲಿ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಭಯ ಜಿಲ್ಲೆಗಳ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಪ್ರಕಟನೆ ತಿಳಿಸಿದೆ.

Advertisement

ಸಂಕಲ್ಪ ಸಮಾವೇಶ
ಬೂತ್‌, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಮಂಡಲ ಸಮಿತಿ ಪದಾಧಿಕಾರಿಗಳಿಗೆ ಸಂಕಲ್ಪ ಬೋಧಿಸುವುದರಿಂದ ಸಮಾವೇಶವನ್ನು ಸಂಕಲ್ಪ ಸಮಾವೇಶವೆಂದು ಕರೆಯಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಪಕ್ಷವನ್ನು ಸಂಘಟಿಸುವ ಬಗ್ಗೆ, ಮುಂದಿನ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಬಗ್ಗೆ ಸಂಕಲ್ಪಿಸಲಾಗುವುದು. 1,000
ಬೂತ್‌ಗಳಿಂದ ಸುಮಾರು 12,000 ಕಾರ್ಯ ಕರ್ತರು ಭಾಗವಹಿಸುವರು ಎಂದು ಉಡುಪಿ ಜಿಲ್ಲಾಧ್ಯಕ್ಷ ಸುರೇಶ್‌ ನಾಯಕ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next