Advertisement

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

10:14 PM May 05, 2024 | Team Udayavani |

ಉಡುಪಿ: ನಿವೃತ್ತ ಬ್ಯಾಂಕ್‌ ಅಧಿಕಾರಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ.

Advertisement

ನಿವೃತ್ತ ಬ್ಯಾಂಕ್‌ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್‌ ಆ್ಯಪ್‌ಗೆ ಅನಾಮಧೇಯ ನಂಬರ್‌ನಿಂದ ಲಿಂಕ್‌ವೊಂದು ಬಂದಿತ್ತು. ಅದನ್ನು ಕ್ಲಿಕ್‌ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್‌ ಖಾತೆಯಿಂದ ಹಂತಹಂತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಪುರೋಹಿತರ ಬ್ಯಾಂಕ್‌
ಖಾತೆಯಿಂದ ಹಣ ವರ್ಗಾವಣೆ
ಉಡುಪಿ: ಉಡುಪಿಯ ಪುರೋಹಿತರೊಬ್ಬರ ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ.

ಮೇ 4ರಂದು ಪುರೋಹಿತ ಗಣೇಶ್‌ ಕೆ.ಅವರ ಸಂಖ್ಯೆಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ನಿಮ್ಮ ಕೆನರಾ ಬ್ಯಾಂಕ್‌ಗೆ ಸಂಬಂಧಪಟ್ಟಂತೆ ಕೆವೈಸಿ ಅಪ್‌ಡೇಟ್‌ ಮಾಡಬೇಕಾಗಿರುವುದರಿಂದ ನಿಮ್ಮ ಮೊಬೈಲ್‌ ಸಂಖ್ಯೆಗೆ ಬಂದಿರುವ ಒಟಿಪಿ ನೀಡಿ ಎಂದು ಹೇಳಿದ್ದರು. ಅದನ್ನು ನಂಬಿದ ಗಣೇಶ್‌ ಅವರು ನಂಬರ್‌ ನೀಡಿದ್ದು, ಕೂಡಲೇ ಅವರ ಬ್ಯಾಂಕ್‌ ಖಾತೆಯಿಂದ 1,90,000 ರೂ. ಆರೋಪಿಯ ಖಾತೆಗೆ ವರ್ಗಾವಣೆಯಾಗಿದೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next