Advertisement

Udupi; ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ

09:35 AM Jan 20, 2024 | Team Udayavani |

ಉಡುಪಿ: ಬಸ್‌ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ.

Advertisement

ಜೆಎಮ್‌ಟಿ ಬಸ್‌ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್ ಅಡ್ಡಗಟ್ಟಿ ಚೂರಿ ಇರಿದಿದ್ದಾರೆ ಎಂದು ತಿಳಿದು ಬಂದಿದೆ.

ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಇದರ ವಿಚಾರವಾಗಿ ನಗರ ಠಾಣೆಯಲ್ಲಿ ರಾಜಿ ಪಂಚಾಯಿತಿ ನಡೆಸಿ ಕಳುಹಿಸಲಾಗಿತ್ತು.

ಇದನ್ನೂ ಓದಿ:Bharat Jodo Nyay Yatra; ಬಜರಂಗ್ ಬಲಿಯ ಮುಖವಾಡ ಧರಿಸಿ ಗಧೆ ಹಿಡಿದ ರಾಹುಲ್ ಗಾಂಧಿ

ಬಳಿಕ ರಾತ್ರಿ ಮೂವರಿದ್ದ ತಂಡವು ಈ ಕೃತ್ಯ ಎಸಗಿದ್ದು ಗಾಯಳು ಬಸ್ ಚಾಲಕರು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next