Advertisement

Udupi Video Incident: ಬಿಜೆಪಿಯಿಂದ ಬೃಹತ್ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

11:09 AM Jul 28, 2023 | Team Udayavani |

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ ಪೊಲೀಸ್ ಭದ್ರತೆಯ ನಡುವೆ ಶುಕ್ರವಾರ ಆರಂಭವಾಗಿದೆ.

Advertisement

ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿಯಿಂದ ಹೊರಟ ‘ಬೃಹತ್ ಪ್ರತಿಭಟನಾ ಮೆರವಣಿಗೆ’ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿಯ ಬಳಿ ಸಮಾಗಮಗೊಳ್ಳಲಿದೆ.  ‘ಪ್ರತಿಭಟನಾ ಸಭೆ’ ನಡೆಸಿ ‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸುವ ಮನವಿ’ಯನ್ನು ಸಲ್ಲಿಸಲಾಗುತ್ತದೆ.

ಇದನ್ನೂ ಓದಿ:49 ವರ್ಷಗಳಲ್ಲೇ ಮೊದಲು..: ಅಪರೂಪದ ಸಾಧನೆ ಮಾಡಿದ ಕುಲದೀಪ್- ಜಡೇಜಾ

ಪೊಲೀಸ್ ಬಂದೊಬಸ್ತ್: ಜಿಲ್ಲಾ ಬಿಜೆಪಿ ಕಚೇರಿ ಬಳಿಯಿಂದ ಬನ್ನಂಜೆಯ ಎಸ್ಪಿ ಕಚೇರಿಯವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುಮಾರು 800ಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next