Advertisement

Udyan Express ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ದುರಂತ, ಮೆಜೆಸ್ಟಿಕ್ ಸುತ್ತ ದಟ್ಟ ಹೊಗೆ

10:07 AM Aug 19, 2023 | Team Udayavani |

ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

Advertisement

ಶನಿವಾರ ಬೆಳಿಗ್ಗೆ ಪ್ರಯಾಣಿಕರನ್ನು ಹೊತ್ತ ರೈಲು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬಂದು ನಿಂತು ಸುಮಾರು ಎರಡು ಗಂಟೆಗಳ ಬಳಿಕ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಕೂಡಲೇ ಎಚ್ಚೆತ್ತ ಪ್ರಯಾಣಿಕರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ಈ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ.

ಮೊದಲಿಗೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಪಕ್ಕದ ಎರಡು ಬೋಗಿಗಳಿಗೆ ಆವರಿಸಿಕೊಂಡಿದೆ ಎನ್ನಲಾಗಿದೆ.

ಬೆಂಕಿ ಆವರಿಸಿದ ಪರಿಣಾಮ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿದೆ.

ತಾಂತ್ರಿಕ ಸಮಸ್ಯೆಯಿಂದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಇದನ್ನೂ ಓದಿ: Bihar journalist: ಮನೆಯಲ್ಲೇ ಬಿಹಾರ ಪತ್ರಕರ್ತನ ಗುಂಡಿಕ್ಕಿ ಹತ್ಯೆ: ನಾಲ್ವರು ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next