Advertisement

ದಕ್ಷಿಣ ಕನ್ನಡಿಗರ ಸಂಘದಿಂದ 21ರಂದು ಯುಗಾದಿ ಸಂಭ್ರಮ

12:27 AM Apr 20, 2019 | Team Udayavani |

ಬೆಂಗಳೂರು: ದಕ್ಷಿಣ ಕನ್ನಡಿಗರ ಸಂಘದ ವತಿಯಿಂದ ಏ.21ರಂದು ಯುಗಾದಿ ಸಂಭ್ರಮ ಮತ್ತು ವಜ್ರ ಮಹೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.

Advertisement

ಎಫ್ಕೆಸಿಸಿಐ ಸಭಾಂಗಣದಲ್ಲಿ ಅಂದು ಮಧ್ಯಾಹ್ನ 3.10ಕ್ಕೆ ಯಕ್ಷಕರ್ದಮ ಬೆಂಗಳೂರು ಕಲಾವಿದರಿಂದ ಪಾರ್ತಿಸುಬ್ಬ ರಚಿತ “ಶೂರ್ಪನಖ ಗರ್ವಭಂಗ’ ಯಕ್ಷಗಾನ ತಾಳಮದ್ದಲೆ ಹಮ್ಮಿಕೊಳ್ಳಲಾಗಿದೆ. ಪ್ರೊ.ಕೆ.ಇ.ರಾಧಾಕೃಷ್ಣ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ನಡೆಯಲಿದ್ದು, ಕೆಪಿಎಚ್‌ಆರ್‌ಎ ಮತ್ತು ತುಳುವೆರೆಂಕುಲು ಮಾಜಿ ಅಧ್ಯಕ್ಷ ಕೆ.ಎಲ್‌.ರಾಮನಾಥ್‌ ಭಟ್‌ ಹಾಗೂ ಯಕ್ಷಗಾನ ಕಲಾವಿದ ಶ್ರೀನಿವಾಸ ಸಾಸ್ತಾನ ಅವರನ್ನು ಸನ್ಮಾನಿಸಲಾಗುವುದು.

ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ ಎಸ್‌.ಶೆಟ್ಟಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಎನ್‌.ಆರ್‌.ನಾರಾಯಣ ರಾವ್‌, ಸೆಂಚುರಿ ಗ್ರೂಪ್‌ನ ಅಧ್ಯಕ್ಷ ಡಾ.ಪಿ.ದಯಾನಂದ ಪೈ, ಎಂಆರ್‌ಜಿ ಗ್ರೂಫ್ನ ಅಧ್ಯಕ್ಷ ಕೆ.ಪ್ರಕಾಶ್‌ ಶೆಟ್ಟಿ ಹಾಗೂ ಉದ್ಯಮಿ ಸುಖಲತಾ ಎಸ್‌.ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ದಕ್ಷಿಣ ಕನ್ನಡಿಗರ ಸಂಘದ ಅಧ್ಯಕ್ಷ ಬಾ.ರಾಮಚಂದ್ರ ಉಪಾಧ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next