Advertisement

ರಸ್ತೆ ಸರಿಪಡಿಸದಿದ್ದಲ್ಲಿ ಯುಜಿಡಿ ಗುತ್ತಿಗೆ ಸಂಸ್ಥೆಯ ಕಚೇರಿಯ ಮುಂದೆ ಪ್ರತಿಭಟನೆಯ ಎಚ್ಚರಿಕೆ

03:07 PM Dec 14, 2021 | Team Udayavani |

ದಾಂಡೇಲಿ: ನಗರದ 14 ನೇ ಬ್ಲಾಕಿನ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು, ಯುಜಿಡಿ ಕಾಮಗಾರಿ ಸಂಸ್ಥೆಯವರು ಪೈಪ್ಲೈನ್ ಅಳವಡಿಕೆಗಾಗಿ ರಸ್ತೆಯನ್ನು ಅಗೆದು ಪೈಪ್ಲೈನ್ ಅಳವಡಿಸಿ, ಮುಚ್ಚಿ, ಅದರ ಮೇಲೆ ಜಲ್ಲಿ ಕಲ್ಲುಗಳನ್ನು ಹಾಕಿದ್ದರೂ ರಸ್ತೆ ಮಾತ್ರ ಇದುವರೆಗೆ ದುರಸ್ತಿ ಮಾಡಿಲ್ಲ.

Advertisement

ಪರಿಣಾಮವಾಗಿ ಪ್ರತಿನಿತ್ಯ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ರಸ್ತೆ ಪೂರ್ಣ ಹದಗೆಟ್ಟಿದ್ದು, ಈ ಬಗ್ಗೆ ಯುಜಿಡಿ ಗುತ್ತಿಗೆ ಸಂಸ್ಥೆಯವರಿಗೆ ಸಾಕಷ್ಟು ಬಾರಿ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ.

ವಾರದೊಳಗೆ ರಸ್ತೆ ದುರಸ್ತಿ ಮಾಡದಿದ್ದಲ್ಲಿ ಯುಜಿಡಿ ಗುತ್ತಿಗೆ ಸಂಸ್ಥೆಯ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಮಾಡಲಾಗುವುದೆಂದು ಮಾಧ್ಯಮದ ಮೂಲಕ ಸ್ಥಳೀಯರು ಎಚ್ಚರಿಕೆಯನ್ನು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next