Advertisement

ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದ ಉಗ್ರಪ್ಪ, ಶಿವರಾಮೇಗೌಡ

06:00 AM Dec 13, 2018 | Team Udayavani |

ನವದೆಹಲಿ: ಕರ್ನಾಟಕದ ಬಳ್ಳಾರಿಯಿಂದ ಲೋಕಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್‌ನ ವಿ.ಎಸ್‌.ಉಗ್ರಪ್ಪ ಮತ್ತು ಮಂಡ್ಯದಿಂದ ಗೆದ್ದಿರುವ ಜೆಡಿಎಸ್‌ನ ಎಲ್‌.ಆರ್‌.ಶಿವರಾಮೇ ಗೌಡ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

Advertisement

ಇಬ್ಬರು ನಾಯಕರೂ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸ್ಪೀಕರ್‌ ಬಳಿಗೆ ತೆರಳಿ ಇಬ್ಬರು ನಾಯಕರು ಪರಿಚಯವನ್ನೂ ಮಾಡಿಕೊಂಡರು. ನ.3ರಂದು ಕರ್ನಾಟಕದ 2 ಕ್ಷೇತ್ರಗಳಿಗೆ ಉಪ-ಚುನಾವಣೆ ನಡೆದು ನ.6ರಂದು ಫ‌ಲಿತಾಂಶ ಪ್ರಕಟವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next