Advertisement

Ujire; ಆ್ಯಸಿಡ್‌ ದಾಳಿ ಪ್ರಕರಣ: 29 ವರ್ಷ ಬಳಿಕ ಆರೋಪಿ ಖುಲಾಸೆ

12:04 AM Feb 20, 2024 | Team Udayavani |

ಬೆಳ್ತಂಗಡಿ: ಉಜಿರೆಯಲ್ಲಿ 1995ರ ಸೆಪ್ಟಂಬರ್‌ 27ರಂದು ನಡೆದ ಆ್ಯಸಿಡ್‌ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

Advertisement

ಉಜಿರೆ ಗ್ರಾಮದ ನಿವಾಸಿ ಮಂಜುನಾಥ್‌ ಪ್ರಭು ಅವರ ಮಗ ಗಣೇಶ್‌ ಪ್ರಭು ಅವರ ಮಾಲಕತ್ವದ ಬಾಡಿಗೆ ಮನೆಯಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ವೀರಪ್ಪ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಇದ್ದು, ಆರೋಪಿತನ ಪತ್ನಿ ಗಣೇಶ್‌ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವಿಸುತ್ತಿದ್ದರು. ಅನಂತರ ಆಕೆಯನ್ನು ಕೆಲಸದಿಂದ ತೆಗೆದುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಗಣೇಶ್‌ ಪ್ರಭುವಿನ ಮೇಲೆ ಆ್ಯಸಿಡ್‌ ದಾಳಿ ಮಾಡಿದ್ದ ಎನ್ನಲಾಗಿದೆ.

ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ದೀರ್ಘ‌ಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next