Advertisement

Road Mishap ಉಜಿರೆ: ಆಮ್ನಿ-ಕಾರು ಢಿಕ್ಕಿ

12:51 AM May 14, 2024 | Team Udayavani |

ಬೆಳ್ತಂಗಡಿ: ಉಜಿರೆಯ ಕಾಲೇಜು ರಸ್ತೆಯಲ್ಲಿ ಕಾರೊಂದು ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ತಿರುಗಿಸುತ್ತಿದ್ದ ವೇಳೆ ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ಆಮ್ನಿಗೆ ಢಿಕ್ಕಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಆಮ್ನಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

Advertisement

ಕೆಲಹೊತ್ತು ಟ್ರಾಫಿಕ್‌ ಸಮಸ್ಯೆ ಉಂಟಾಯಿತು.ಇಲ್ಲಿ ಅಂಗಡಿ ಮುಂಗಟ್ಟುಗಳ ಎದುರೇ ಮುಖ್ಯ ರಸ್ತೆಯಲ್ಲೇ ವಾಹನ ನಿಲ್ಲಿಸುವುದರಿಂದ ಕಲವೊಂದು ಬಾರಿ ಏಕಾಏಕಿ ಚಲಿಸುವ ಮೂಲಕ ಅಪಘಾತಕ್ಕೆ ಕಾರಣವಾಗುತ್ತಿದೆ.

ಕುದ್ಯಾಡಿ: ನಗ ನಗದು ಕಳ್ಳತನ
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ ನಗದು ದೋಚಿದ ಪ್ರಕರಣ ವರದಿಯಾಗಿದೆ.
ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಅವರು ಮೇ 11ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು. ಮೇ 13ರಂದು ಮನೆಗೆ ಬಂದು ಪರಿಶೀಲನೆ ನಡೆಸಿದಾಗ, ಮನೆಯ ಬೀರುವಿನಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ. ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಠಾಣೆ
ಯಲ್ಲಿ ದೂರು ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next