Advertisement

‘ಪಾಕಿಸ್ಥಾನ್ ಜಿಂದಾಬಾದ್’ಘೋಷಣೆ ಕೂಗಿದ ವಿಚಾರ: ಮೂರು ಮಂದಿ ವಶಕ್ಕೆ ಪಡೆದು ವಿಚಾರಣೆ

12:02 PM Dec 31, 2020 | Team Udayavani |

ಬೆಳ್ತಂಗಡಿ: ಗ್ರಾ.ಪಂ.ನ ಮತ ಎಣಿಕೆ ಕಾರ್ಯ ನಡೆಯುತ್ತಿದ್ದ ವೇಳೆ ಉಜಿರೆ‌ಯಲ್ಲಿ ಪಾಕಿಸ್ಥಾನ ಪರ ಜಿಂದಾಬಾದ್ ಘೋಷಣೆ ಕೂಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

Advertisement

ಪಿಲಿಚಂಡಿ ಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22 ), ದಾವೂದ್ ( 36) ಹಾಗೂ ಇಸಾಕ್ (28) ವಶಕ್ಕೆ ಪಡೆಯಲಾಗಿದೆ.

ದ.ಕ.ಜಿಲ್ಲಾ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಸೂಚನೆ ಮೇರೆಗೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಹಾಗೂ ಉಪನಿರೀಕ್ಷಕ ನಂದಕುಮಾರ್ ತಂಡ ಕಾರ್ಯಾಚರಣೆಯಲ್ಲಿ ತೊಡಗಿದೆ.

ಇದನ್ನೂ ಓದಿ:ಹೊಸ ವರ್ಷಾಚರಣೆಗೆ ನಿರ್ಬಂಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.144 ನಿಷೇಧಾಜ್ಞೆ ಜಾರಿ

ಇನ್ನು ಹಲವು ಮಂದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದ್ದು ಬಂಟ್ವಾಳ ವ್ಯಾಪ್ತಿಯ ಯುವಕರು ಘೋಷಣೆ ವೇಳೆ ತಂಡದಲ್ಲಿರುವ ಕುರಿತು ತನಿಖೆ ಮುಂದುವರೆಸಲಾಗಿದೆ.

Advertisement

ಬೆಳ್ತಂಗಡಿ ಮತಎಣಿಕೆ ಕೇಂದ್ರದ ಬಳಿ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದ ವಿಚಾರವಾಗಿ ಎಸ್.ಡಿ.ಪಿ.ಐ ಪ್ರತಿಕ್ರಿಯಿಸಿ ವಿಡಿಯೋ ತಿರುಚಲಾಗಿದೆ ಎಂದು ಹೇಳಿಕೆ ನೀಡಿತ್ತು. ಆದರೆ ತನಿಖೆ ವೇಳೆ ವಿಡಿಯೋದಲ್ಲಿ ಘೋಷಣೆ ಕೂಗಿರುವ ವಿಚಾರ ಸ್ಪಷ್ಟವಾಗುತ್ತಿದ್ದಂತೆ ವಿಚಾರಣೆ ತೀವ್ರಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪ್ರಕರಣ ಸಾಬೀತಾದರೆ ಉದ್ದೇಶಪೂರ್ವಕವಾಗಿ ದೇಶ ದ್ರೋಹ 124(A) ಕಾಯ್ದೆಯಡಿ ಪ್ರಕರಣ ದಾಖಲಾಗಲಿದೆ ಎಂದು ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next