Advertisement

ಕೋವಿಡ್ : ಗಣರಾಜ್ಯೋತ್ಸವಕ್ಕೆ ಭಾರತ ಭೇಟಿ ರದ್ದು ಮಾಡಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

06:39 PM Jan 05, 2021 | Team Udayavani |

ನವದೆಹಲಿ :  ಈ ಬಾರಿಯ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಆಹ್ವಾನಿತರಾಗಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಕೋವಿಡ್ ರೂಪಾಂತರಿ ಹೆಚ್ಚುತ್ತಿರುವ ಕಾರಣದಿಂದ ತಮ್ಮ ಭಾರತ ಭೇಟಿಯನ್ನು ರದ್ದು ಮಾಡಿದ್ದಾರೆ.

Advertisement

ಜನವರಿ 26 ರಂದು ಭಾರತದ ಗಣರಾಜ್ಯೋತ್ಸವಕ್ಕೆ ಈ ಬಾರಿ ವಿಶೇಷ ಅತಿಥಿಯಾಗಿ ಆಹ್ವಾನವಾಗಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ , ಬ್ರಿಟನ್ ನಲ್ಲಿ ಹೆಚ್ಚುತ್ತಿರುವ  ಕೋವಿಡ್ ಪ್ರಮಾಣವನ್ನು ಮನಗಂಡು, ದೇಶದ ಹಿತದೃಷ್ಟಿಯಿಂದ ತಮ್ಮ ಭಾರತ ಪ್ರವಾಸವನ್ನು ರದ್ದು ಮಾಡುತ್ತೇನೆ. ದೇಶದಲ್ಲಿ ಲಾಕ್ ಡೌನ್ ಹೇರಲಾಗಿದ್ದು, ಈ ಕುರಿತು ಹೆಚ್ಚಿನ ಗಮನ ಹರಿಸಿ, ಕೋವಿಡ್ ನಿಯಂತ್ರಣ ಮಾಡುವ ಕಡೆ ಹೆಚ್ಚಿನ ಒತ್ತನ್ನು ನೀಡಬೇಕಿದೆ  ಎಂದು ಪ್ರಧಾನಿ ಮೋದಿಗೆ ದೂರವಾಣಿ ಮೂಲಕ ಪ್ರವಾಸ ರದ್ದು ಮಾಡಿದ್ದರ ಕುರಿತು  ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬ್ರಿಟನ್ ನಲ್ಲಿ ರೂಪಾಂತರಿ ಕೋವಿಡ್ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು, ಇತ್ತೀಚೆಗಷ್ಟೇ ದೇಶದಲ್ಲಿ ಸಂಪೂರ್ಣ ಲಾಕ್ ಡೌನ್ ನ್ನು ಹೇರಿದ್ದು ಫೆಬ್ರವರಿ ಮಧ್ಯದವರೆಗೆ ಬ್ರಿಟನ್ ಸಂಪೂರ್ಣ ಸ್ತಬ್ಧವಾಗಿರಲಿದೆ. ಕಳೆದ ಏಳು ದಿನಗಳಿಂದ ಬ್ರಿಟನ್ ನಲ್ಲಿ 50 ಸಾವಿರಕ್ಕೂ ಹೆಚ್ಚಿನ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ ಸಾವಿನ ಪ್ರಮಾಣವು ಹೆಚ್ಚಿದೆ.

Advertisement

Udayavani is now on Telegram. Click here to join our channel and stay updated with the latest news.

Next