Advertisement

3 ವರ್ಷದಲ್ಲಿ ಯುಕೆಪಿ ಪೂರ್ಣ

12:25 PM Dec 24, 2019 | Team Udayavani |

ಬಾಗಲಕೋಟೆ: ಆಲಮಟ್ಟಿ ಜಲಾಶಯ ಎತ್ತರಿಸುವುದರಿಂದ ಮುಳುಗಡೆಗೊಳ್ಳುವ ಭೂಮಿ ಹಾಗೂ ಗ್ರಾಮ ಉಳಿಸಿಕೊಳ್ಳಲು ನಾರ್ವೆ ಮಾದರಿ ತಡೆಗೋಡೆ ನಿರ್ಮಿಸಬೇಕೆಂಬ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ. ಯುಕೆಪಿ ಯೋಜನೆಗೆ ಬೇಕಿರುವ ಬಾಕಿ ಇರುವ 1.17 ಲಕ್ಷ ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಕೂಡಲೇ ಆರಂಭಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದರು.

Advertisement

ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಯುಕೆಪಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಯುಕೆಪಿ 3ನೇ ಹಂತದ ಯೋಜನೆಗೆ ಒಟ್ಟು 1.34 ಲಕ್ಷ ಎಕರೆ ಭೂಮಿ ಬೇಕಾಗುತ್ತದೆ. ಈಗಾಗಲೇ 17,600 ಎಕರೆ ಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗಿದೆ. ಇನ್ನೂ 1.17 ಲಕ್ಷ ಎಕರೆ ಸ್ವಾಧೀನಪಡಿಸಿಕೊಳ್ಳಬೇಕಿದ್ದು, ಕಳೆದ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಕೂಡಲೇ ಈ ಭೂಮಿ ಸ್ವಾಧೀನಕ್ಕೆ ಪ್ರಕ್ರಿಯೆ ಆರಂಭಿಸಬೇಕು. ಪರಿಹಾರ ವಿತರಣೆಗೆ ಬೇಕಾಗುವ ಅಗತ್ಯ ಅನುದಾನ, ಕೆಬಿಜೆಎನ್‌ ಎಲ್‌ ಮೂಲಕ ನೀಡಲಾಗುವುದು ಎಂದು ತಿಳಿಸಿದರು.

ಕೃಷ್ಣಾ ನ್ಯಾಯಾಧೀಕರಣದ ಅಂತಿಮ ತೀರ್ಪಿನ ಪ್ರಕಾರ, ನಮಗೆ 177 ಟಿಎಂಸಿ ನೀರು ಹಂಚಿಕೆಯಾಗಿದೆ. ಈ ನೀರನ್ನು ಸಂಪೂರ್ಣ ಸದ್ಭಳಕೆ ಮಾಡಿಕೊಳ್ಳಲು ಮೂರು ವರ್ಷದಲ್ಲಿ ಎಲ್ಲ ನೀರಾವರಿ ಯೋಜನೆ ಪೂರ್ಣಗೊಳಿಸಲು ಸರ್ಕಾರ ಸಂಕಲ್ಪ ಹಾಕಿಕೊಂಡಿದೆ. ಇದಕ್ಕೆ ತಕ್ಕಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next