Advertisement

ಶಾಂತಿ ಸೂತ್ರಕ್ಕೆ ಭಾರತದ ಬೆಂಬಲ ಕೋರಿದ ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ

01:36 AM Dec 27, 2022 | Team Udayavani |

ಹೊಸದಿಲ್ಲಿ: ರಷ್ಯಾ-ಉಕ್ರೇನ್‌ ಯುದ್ಧದ ಹಿನ್ನೆಲೆಯಲ್ಲಿ ಶಾಂತಿ ಸೂತ್ರಕ್ಕೆ ಭಾರತ ಬೆಂಬಲಿಸಬೇಕು ಎಂದು ಉಕ್ರೇನ್‌ ಅಧ್ಯಕ್ಷ ವೊಲೆಡಿಮಿರ್‌ ಝೆಲೆನ್‌ಸ್ಕಿ ಮನವಿ ಮಾಡಿದರು.

Advertisement

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೋನ್‌ ಕರೆ ಮಾಡಿದ ಝೆಲೆನ್‌ಸ್ಕಿ, ಜಿ20 ಅಧ್ಯಕ್ಷತೆ ವಹಿಸಿರುವ ಭಾರತ, ರಷ್ಯಾ- ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಬೇಕು ಎಂದು ಹೇಳಿದರು.

ಈ ವೇಳೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, “ಉಕ್ರೇನ್‌ ಮತ್ತು ರಷ್ಯಾ ನಡುವಿನ ಯುದ್ಧವನ್ನು ಉಭಯ ದೇಶಗಳು ಕೂಡಲೇ ಸ್ಥಗಿತಗೊಳಿಸಬೇಕು. ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗದ ಮೂಲಕ ವಿವಾದವನ್ನು ಪರಿಹರಿಸಿ ಕೊಳ್ಳಬೇಕು. ಶಾಂತಿ ಒಪ್ಪಂದಕ್ಕೆ ಭಾರತ ಸದಾ ಬೆಂಬಲ ನೀಡುತ್ತದೆ,’ ಎಂದು ಪ್ರತಿಪಾದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next