Advertisement

ರೇಪ್ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ : ಆಯುಕ್ತರಿಗೆ 8 ರ ಬಾಲೆಯ ಮನವಿ

06:26 PM Nov 25, 2021 | Team Udayavani |

ಮಂಗಳೂರು: ಉಳಾಯಿಬೆಟ್ಟುವಿನಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿ 8 ವರ್ಷದ ಬಾಲಕಿಯೊಬ್ಬಳು ನವೆಂಬರ್ 25 ರಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾಳೆ.

Advertisement

ಕುಳಾಯಿ ಮೂಲದ 4ನೇ ತರಗತಿಯಲ್ಲಿ ಓದುತ್ತಿರುವ ಚಾರ್ವಿ ನಿರಂಜನ್ ಪೊಲೀಸ್ ಆಯುಕ್ತರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದು, ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾಳೆ.

ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶಶಿಕುಮಾರ್ ಅವರು ಚಾರ್ವಿಗೆ ಭರವಸೆ ನೀಡಿದರು.

ಮಂಗಳೂರಿನ ಕಾರ್ಖಾನೆ ಬಳಿ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದ ಆರೋಪದ ಮೇಲೆ ಮಧ್ಯಪ್ರದೇಶ ಮೂಲದ ಜಯಬಾನ್ (21), ಮುಕೇಶ್ ಸಿಂಗ್ (20), ಮುನೀಮ್ ಸಿಂಗ್ (20) ಮತ್ತು ಜಾರ್ಖಂಡ್‌ನ ಮನೀಶ್ ತಿರ್ಕಿ (33) ಎನ್ನುವ ಆರೋಪಿಗಳನ್ನು ಪೊಲೀಸರು ನವೆಂಬರ್ 24 ರಂದು ಬಂಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next