Advertisement

ಉಳ್ಳಾಲ: ಮಾವಿನ ಹಣ್ಣು ಕೀಳಲು ಮರ ಹತ್ತಿದ ಯುವಕ ವಿದ್ಯುತ್ ತಂತಿ ತಗುಲಿ ಸಾವು

07:31 PM Jun 24, 2022 | Team Udayavani |

ಉಳ್ಳಾಲ: ಮಾವಿನಕಾಯಿ ಕೀಳಲು ಮರಹತ್ತಿದ ಯುವಕನೋರ್ವ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ಶುಕ್ರವಾರ ಸಂಜೆ ವೇಳೆ ಸಂಭವಿಸಿದೆ.

Advertisement

ಮಹಮ್ಮದ್ ಇಲಿಯಾಸ್ (21) ಮೃತ ದುರ್ದೈವಿ. ಸಂಜೆ ವೇಳೆ ಮನೆ ಸಮೀಪದ ಕಂಪೌಂಡಿನಲ್ಲಿರುವ ಮಾವಿನಮರಕ್ಕೆ ಹಣ್ಣು ಕೀಳಲೆಂದು ತೆರಳಿದ ಸಂದರ್ಭ ಘಟನೆ ನಡೆದಿದೆ. ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ‌ . ಮಾವಿನ ಮರದ ಮೇಲೆ ವಿದ್ಯುತ್ ತಂತಿ ಹಾದುಹೋಗಿದ್ದರೂ ಅದನ್ನು ಕಟಾವು ನಡೆಸದೆ ಇದ್ದುದರಿಂದ ಘಟನೆ ನಡೆದಿರುವುದಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ : ರಾಕ್ಷಸಿ ಕೃತ್ಯ :ಮೂಡಲಗಿಯ ಹಳ್ಳದಲ್ಲಿ ಎಸೆದ ಏಳು ಭ್ರೂಣಗಳ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next