Advertisement

ಉಳಾಯಿಬೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯೂಸುಫ್ ಕೊಲೆ ಯತ್ನ

02:26 PM Oct 13, 2020 | keerthan |

ಮಂಗಳೂರು: ಉಳಾಯಿಬೆಟ್ಟು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿ ನಗರದ ಕುಲಶೇಖರ ಬಳಿ ನಡೆದಿದೆ.

Advertisement

ಯೂಸುಫ್ ಅವರು ತನ್ನ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕೊಂದು ಯೂಸುಫ್‌ರ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ತಕ್ಷಣ ಯೂಸುಫ್‌ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದು, ಅಷ್ಟರಲ್ಲಿ ಎದುರಿನಿಂದ ಬಂದು ಅಡ್ಡ ನಿಂತ ಬಿಳಿ ಬಣ್ಣದ ಕಾರಿನಿಂದಿಳಿದ ನಾಲ್ಕೈದು ಮಂದಿ ಯೂಸುಫ್‌ಗೆ ತಲವಾರು ದಾಳಿ ನಡೆಸಿ ಕಾರಿನ ಗಾಜು ಹುಡಿಗೈದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಜಾಲ ಪತ್ತೆ

ಗಾಯಗೊಂಡ ಯೂಸುಫ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next