Advertisement

Ullal: ಅಸಭ್ಯ ವಾಗಿ ವರ್ತಿಸಿ ವಿದ್ಯಾರ್ಥಿನಿಗೆ ಚೂರಿ ಇರಿದವನಿಗೆ 18 ವರ್ಷ ಜೈಲು

05:48 PM Jan 12, 2024 | Team Udayavani |

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಗಂಬಿಲ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಅಸಭ್ಯ ವಾಗಿ ವರ್ತಿಸಿ ಆಕೆಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ( ವಿಶೇಷ) ನ್ಯಾಯಾಲಯ18 ವರ್ಷ 1 ತಿಂಗಳ ಸಜೆ ಪ್ರಕಟಿಸಿದೆ.

Advertisement

ಸುಶಾಂತ್ ಯಾನೇ ಶಾನ್ (31) ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಅಸಭ್ಯ ವಾಗಿ ವರ್ತಿಸಿ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಬಳಿಕ ತಾನೂ ಕುತ್ತಿಗೆ ಹಾಗೂ ಕೈಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

2019 ರ ಜೂ.28ರಂದು ಘಟನೆ‌ ನಡೆದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಬ್ಬರೂ ಚೇತರಿಕೆ ಕಂಡಿದ್ದರು. ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ಒಟ್ಟು 21 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿತ್ತು. ಸುಶಾಂತ್ ಮೇಲೆ‌ ಹೊರಿಸಲಾದ ಎಲ್ಲ ಶಿಕ್ಷಾರ್ಹ ಕಲಂಗೆ ಅಪರಾಧಿ ಎಂದು ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಅವರು ತೀರ್ಪು ಪ್ರಕಟಿಸಿದ್ದಾರೆ. ದಂಡ ರೂಪದಲ್ಲಿ ವಸೂಲಾಗುವ 2 ಲಕ್ಷ ರೂ‌. ಮೊತ್ತವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶಿಸಲಾಗಿದೆ.ಸಂತ್ರಸ್ತೆ ಪರ ಸರಕಾರಿ ಅಭಿಯೋಜಕಿ ಜ್ಯೋತಿ‌ ಪ್ರಮೋದ ನಾಯಕ ಅವರು ವಾದ ಮಂಡನೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next