Advertisement

Ullal ಬೈಕ್‌ ಢಿಕ್ಕಿ: ಬೇಕರಿ ಮಾಲಕ ಸಾವು

01:02 AM Mar 19, 2024 | Team Udayavani |

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿ ರಸ್ತೆ ದಾಟುತ್ತಿದ್ದಾಗ ಬೈಕ್‌ ಢಿಕ್ಕಿ ಹೊಡೆದು ಬೇಕರಿ ಮಾಲಕ ತಲಪಾಡಿ ನಿವಾಸಿ ರಾಜೇಶ್‌ ಶೆಟ್ಟಿ (49) ರಸ್ತೆಗೆಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿ ಬೇಕರಿ ಹೊಂದಿದ್ದ ರಾಜೇಶ್‌, ಹೆದ್ದಾರಿ ಇನ್ನೊಂದು ಬದಿಯಲ್ಲಿದ್ದ ಮನೆಯಿಂದ ಬೇಕರಿಗೆ ಆಗಮಿಸಲು ಹೆದ್ದಾರಿ ದಾಟಲು ಯತ್ನಿಸಿದಾಗ ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಲ್ಲಿ ಆಗಮಿಸಿದ್ದ ಬೈಕ್‌ ಢಿಕ್ಕಿ ಹೊಡೆದಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಲಪಾಡಿ ದೇವಿಪುರದ ರಥೋತ್ಸವದ ಹಿನ್ನೆಲೆಯಲ್ಲಿ ಮನೆಗೆ ಆಗಮಿಸಿದ್ದ ನೆಂಟರನ್ನು ಉಪಚರಿಸಿ ಮನೆಯಿಂದ ಹೆದ್ದಾರಿಯ ಇನ್ನೊಂದು ಬದಿಯಲ್ಲಿದ್ದ ಬೇಕರಿಗೆ ಆಗಮಿಸಲು ರಸ್ತೆ ದಾಟಲು ಯತ್ನಿಸಿದಾಗ ಈ ಘಟನೆ ನಡೆದಿದೆ.
ತಲಪಾಡಿ ವೀರಾಂಜನೇಯ ವ್ಯಾಯಾಮ ಶಾಲೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಘಟನೆಗೆ ಕಾರಣನಾದ ಬೈಕ್‌ ಸವಾರ ಮಹಮ್ಮದ್‌ ಸೊಹೈಲ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next