Advertisement

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

10:51 PM May 10, 2024 | Team Udayavani |

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಆಮ್ಲೆಟ್ ಮಾರಾಟದ ತಳ್ಳುವ ಗಾಡಿಗೆ ಬಡಿದ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಬೀದಿ ನಾಯಿಯೊಂದು ಮೃತಪಟ್ಟಿದೆ.

Advertisement

ರಾಷ್ಟ್ರೀಯ ಹೆದ್ದಾರಿ 66ರ ಅಂಬಿಕಾ ರಸ್ತೆ ಬಳಿ ಈ ಘಟನೆ ನಡೆದಿದೆ. ತಳ್ಳುವ ಗಾಡಿ ಸಂಪೂರ್ಣ ಹಾನಿಯಾಗಿದ್ದು ಸುಮಾರು 30 ಸಾವಿರ ರೂ. ನಷ್ಟ ಅಂದಾಜಿಸಲಾಗಿದೆ.

ಕಾರಿನಲ್ಲಿದ್ದ ಮೂವರಲ್ಲಿ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next